ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 05:46 pm
HK News Staffer
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am