ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm