ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm