ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm