ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am