ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm