ಬ್ರೇಕಿಂಗ್ ನ್ಯೂಸ್
12-11-20 10:02 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 12: ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಭೂಪನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಪ್ರಭಾಕರ್ ಬಂಧಿತ. ಈತ ಪೋಸ್ಟಲ್ ಸರ್ವಿಸ್, ಇಸ್ರೋ, ಮೆಸ್ಕಾಂ, ಪಿಯುಸಿ, ಎಸ್.ಎಸ್.ಎಲ್.ಸಿ ಶಿಕ್ಷಣ ಇಲಾಖೆಯ ಬೋರ್ಡ್ ನಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸುಮಾರು 2 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ.
ವಂಚನೆ ದುಡ್ಡಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಪ್ರಭಾಕರ್, ಅದೇ ದುಡ್ಡಲ್ಲಿ ತಿರುಪತಿ ತಿಮ್ಮಪ್ಪನಿಗೂ 5 ಲಕ್ಷ ಕಾಣಿಕೆ ಹಾಕಿದ್ದ ವಿಚಾರ ಬಯಲಾಗಿದೆ. ಅಷ್ಟೇ ಅಲ್ಲ, ಉತ್ತರ ಭಾರತದ ವಿವಿಧೆಡೆಗೆ ಹೆಲಿಕಾಪ್ಟರ್ ನಲ್ಲೇ ತೀರ್ಥಯಾತ್ರೆ ನಡೆಸುತ್ತಿದ್ದ ಎನ್ನುವ ವಿಚಾರವೂ ತನಿಖೆಯಲ್ಲಿ ಪೊಲೀಸರಿಗೆ ತಿಳಿದುಬಂದಿದೆ.
ಸುಮಾರು 48 ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪೊಲೀಸರು ಆತನಿಂದ ವಶಕ್ಕೆ ಪಡೆದಿದ್ದಾರೆ. ತುಂಬಾ ಖತರ್ನಾಕ್ ಆಗಿದ್ದ ಕಿಲಾಡಿ, ರಾಜ್ಯಾದ್ಯಂತ ನೂರಾರು ಯುವಕ - ಯುವತಿಯರಿಗೆ ವಂಚಿಸಿದ್ದಾನೆ. ಉದ್ಯೋಗ ಕೊಡಿಸುವ ಆಮಿಷದಲ್ಲಿ ನಕಲಿ ಆಫರ್ ಲೆಟರ್ ನೀಡಿ, ಒಬ್ಬೊಬ್ಬರಿಂದ 10-15 ಲಕ್ಷ ರೂ. ಪೀಕುತ್ತಿದ್ದ. ಈ ಬಗ್ಗೆ ವಂಚನೆಗೊಳಗಾದ ಯುವಕನೊಬ್ಬ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ಆರೋಪಿಯ ಬೆನ್ನತ್ತಿದ ಪೊಲೀಸರಿಗೆ ಆತನ ಕಾರ್ಯಶೈಲಿ, ಐಷಾರಾಮಿ ಜೀವನ ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
A man was arrested in Chikmagalur by police for cheating people on the promise of offering government job offer and extorted money crores from them.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm