ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm