ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm