ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am