ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm