ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm