ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm