ಬ್ರೇಕಿಂಗ್ ನ್ಯೂಸ್
02-11-23 09:43 pm HK News Desk ಕ್ರೈಂ
ಚಿತ್ರದುರ್ಗ, ನ 02: ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ ಯುವಕನಿಂದ ಮೋಸ ಹೋಗಿ ನ್ಯಾಯಕ್ಕಾಗಿ ಚಿತ್ರದುರ್ಗದ ಯುವತಿ ಅಲೆದಾಡುತ್ತಿದ್ದಾರೆ. 2019 ರಲ್ಲಿ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪರಸ್ಪರ ಸ್ನೇಹ, ಆತ್ಮೀಯತೆ ಬೆಳೆದಿತ್ತು. ಆಗ ಅಮೆರಿಕ ಸೇರಿದಂತೆ ಮತ್ತಿತರ ವಿದೇಶದ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ನಿನಗೆ ಕೆಲಸ ಕೊಡಿಸ್ತೀನಿ ಅಂತ ಯುವತಿಯನ್ನು ನಂಬಿಸಿದ್ದ ಸೌರಭ್ ಫೇಕ್ ಆಫರ್ ಲೆಟರ್ ಕೊಟ್ಟು, ಈಕೆಯಿಂದ ಉದ್ಯೋಗದ ನೆಪದಲ್ಲಿ ಕೋಟಿಗಟ್ಟಲೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರತಿದಿನ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ಅಸಾಮಿ ಸಾಕಷ್ಟು ಬಾರಿ ಆಕೆಯನ್ನು ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗಿರು ಎಂದು ಹೇಳಿ, ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಉದ್ಯೋಗವಂತು ಕೊಡಿಸಲಿಲ್ಲ, ಮದುವೆಯಾಗಿ ಬದುಕಾದರೂ ಕೊಟ್ಟು ಕರುಣೆ ತೋರು ಎಂದು ಕೇಳಿದರೂ ಸೊಪ್ಪು ಹಾಕಿಲ್ಲ. ನಮ್ಮಿಂದ ಪಡೆದ ಎರಡೂವರೆ ಕೋಟಿ ರೂ. ಹಣವಾದರೂ ವಾಪಸ್ ಕೊಟ್ಟುಬಿಡು ಎಂದು ಯುವತಿ ಹಾಗೂ ಆಕೆಯ ಕುಟುಂಬ ಅಂಗಲಾಚಿದರೂ ಸಹ ಕಿಂಚಿತ್ ಅನುಕಂಪವಿಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ 2 ತಿಂಗಳ ಹಿಂದೆ ನೊಂದ ಯುವತಿಯ ತಂದೆ ಕೂಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕವಾದ ತನಿಖೆ ನಡೆಸಿ, ನೊಂದವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.
Job fraud, Chitradurga man cheats girl of 2 crores of getting job in America, rapes her several times. The accused Sowrab has now been arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm