ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm