ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm