ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm