ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am