ಬ್ರೇಕಿಂಗ್ ನ್ಯೂಸ್
04-11-23 12:39 pm Mangalore Correspondent ಕ್ರೈಂ
ಬೆಳ್ತಂಗಡಿ, ನ.4: ಗಂಡ ಹೆಂಡತಿ ಜಗಳದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಕೊಲೆಗೈದು ಬಾವಿಗೆ ತಳ್ಳಿ ಆತ್ಮಹತ್ಯೆ ನಾಟಕವಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ನಿವಾಸಿ ಶಶಿಕಲಾ(27) ಮೃತ ಮಹಿಳೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಸುಧಾಕರ ನಾಯ್ಕನನ್ನು ಬಂಧಿಸಿದ್ದಾರೆ.
ಇವರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಆರು ವರ್ಷದ ಮಗಳಿದ್ದಾಳೆ. ಈ ನಡುವೆ, ಸುಧಾಕರನಿಗೆ ಬೇರೊಬ್ಬಳು ಮಹಿಳೆಯ ಜೊತೆ ಅನೈತಿಕ ಸಂಪರ್ಕ ಇದೆಯೆಂದು ಗಂಡ - ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇದೇ ವಿಚಾರದಲ್ಲಿ ಪತ್ನಿ ಶಶಿಕಲಾ ಮನೆಯವರು ಬಂದು ಸಮಾಧಾನ, ರಾಜಿ ಪಂಚಾತಿಕೆ ಮಾಡಿ ಹೋಗುತ್ತಿದ್ದರು. ನ.3ರಂದು ಬೆಳಗ್ಗೆ ಸುಧಾಕರ ನಾಯ್ಕ ರಬ್ಬರ್ ಟ್ಯಾಪಿಂಗ್ ಮಾಡಿ ಬೇಗನೇ ಮನೆಗೆ ಬಂದಿದ್ದ. ಏಳು ಗಂಟೆಗೆ ಮನೆಗೆ ಬಂದಾಗ, ಪತ್ನಿ ಶಶಿಕಲಾ ಗಂಡನನ್ನು ಪ್ರಶ್ನೆ ಮಾಡಿದ್ದಳು. ಇವತ್ತು ಯಾಕೆ ಬೇಗ ಬಂದಿದ್ದೀರಾ.. ನಾನು ಕೆಲಸಕ್ಕೆ ಹೋದ ನಂತರ ಯಾರಾದ್ರೂ ಹೆಂಗಸರು ಮನೆಗೆ ಬರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಳು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಸುಧಾಕರ ಮತ್ತು ಶಶಿಕಲಾ ನಡುವೆ ಜಗಳವಾಗಿದ್ದು ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೀನು ಬದುಕಿರಬಾರದೆಂದು ಮನೆಯಂಗಳದ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಶಶಿಕಲಾ ಅವರ ಸೋದರ ಶಶಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿ ಸುಧಾಕರ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿ ನಾಟಕ ಮಾಡಿದ್ದು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Belthangady, Husband murders wife dumps her into well for questioning his illicit affair.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm