ಬ್ರೇಕಿಂಗ್ ನ್ಯೂಸ್
04-11-23 09:19 pm Mangalore Correspondent ಕ್ರೈಂ
ಮಂಗಳೂರು, ನ.4: ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ.
ಅ.21ರಂದು ಘಟನೆ ನಡೆದಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ ಎಂಬಾತನನ್ನು ಪೊಲೀಸರು ಬಂಗ್ರಕೂಳೂರು ಬಳಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ KA-41-EW-8959 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1, VIVO ಕಂಪನಿಯ ಮೊಬೈಲ್ ಫೋನ್-1, HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1, KA-41-EW-8959 ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ 2,41,000 ರೂ. ಆಗಬಹುದು.
ಆರೋಪಿತ ಡಾರ್ಲಿಂಗ್ ಚಂದ್ರ(29) ರಾಮನಗರ ಜಿಲ್ಲೆಯ ಬಿಡದಿ ನಿವಾಸಿಯಾಗಿದ್ದು ಈ ಹಿಂದೆ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police arrest Darling Chandra in chain snatching case in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm