ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm