ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm