ಬ್ರೇಕಿಂಗ್ ನ್ಯೂಸ್
13-11-20 12:45 pm Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 13: ನಾಲ್ಕು ದಿವಸಗಳ ಹಿಂದೆ ಪಜೀರು ಗೋವನಿತಾಶ್ರಮದಿಂದ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ, ವಿಧವೆ ಮಹಿಳೆಯೊಬ್ಬಳು ಉಳ್ಳಾಲದಲ್ಲಿ ಮಧ್ಯವಯಸ್ಕ ಮುಸ್ಲಿಂ ಪುರುಷನೊಂದಿಗೆ ಪತ್ತೆಯಾಗಿದ್ದು, ಕೊಣಾಜೆ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರಿನ ಅಡ್ಯಾರ್ ಪದವು ಮೂಲದ ಮಹಿಳೆ ವಿಧವೆಯಾಗಿದ್ದು ಅದೇ ಪರಿಸರದ ನಿವಾಸಿ ಆಗಿರುವ ಶೌಕತ್ ಎಂಬಾತನ ಜೊತೆ ಈ ಹಿಂದೆ ಸಂಪರ್ಕದಲ್ಲಿದ್ದಳು. ಈ ವಿಚಾರ ಅಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ತಿಳಿದು ಇತ್ತೀಚೆಗೆ, ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ವಿಶ್ವ ಹಿಂದು ಪರಿಷತ್ತಿಗೆ ಸೇರಿದ ಕೊಣಾಜೆ ಬಳಿಯ ಪಜೀರು ಗೋವನಿತಾಶ್ರಮಕ್ಕೆ ಸೇರಿಸಿದ್ದರೆನ್ನಲಾಗಿದೆ. ನಾಲ್ಕು ದಿವಸಗಳ ಹಿಂದೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಗುರುವಾರ ಮಹಿಳೆ, ಉಳ್ಳಾಲದಲ್ಲಿ ಶೌಕತ್ ಜೊತೆ ಬುರ್ಖಾಧಾರಿಯಾಗಿ ಪತ್ತೆಯಾಗಿದ್ದರು ಎನ್ನಲಾಗಿದ್ದು, ತನಿಖೆ ಹೆಸರನ್ನು ಆಯಿಷಾ ಎಂದು ಬದಲಿಸಿಕೊಂಡಿದ್ದಳು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ. ಅಡ್ಯಾರ್ ಮೂಲದವನೇ ಆಗಿರುವ ಶೌಕತ್ ಕೂಡ ವಿವಾಹಿತನಾಗಿದ್ದು ಆತನ ಹಿರಿ ಮಗಳಿಗೆ ಮುಂದಿನ ವಾರ ಮದುವೆ ಫಿಕ್ಸ್ ಆಗಿದ್ಯಂತೆ. ಈ ನಡುವೆಯೇ ಶೌಕತ್, ತನ್ನ ಕುಟುಂಬವನ್ನು ತೊರೆದಿದ್ದಾನೆ ಎನ್ನಲಾಗುತ್ತಿದೆ. ಬೇರೆ ಯುವತಿಯರ ಜೊತೆಗೂ ಆತ ಅಕ್ರಮ ಸಂಬಂಧಗಳನ್ನು ಇರಿಸಿದ್ದಾನೆಂದು ತಿಳಿದು ಬಂದಿದೆ.
ಆದರೆ, ಹಿಂದು ಮಹಿಳೆ ಪೊಲೀಸರಲ್ಲಿ ಶೌಕತ್ ಜೊತೆಯೇ ತೆರಳುವುದಾಗಿ ಪಟ್ಟು ಹಿಡಿದಿದ್ದಾಳೆ. ಬಜರಂಗದಳದ ಕಾರ್ಯಕರ್ತರು ಠಾಣೆಯಲ್ಲಿದ್ದು ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ್ದಾರೆ. ಮಧ್ಯ ವಯಸ್ಕ ವ್ಯಕ್ತಿಯೇ ಮಹಿಳೆಯನ್ನು ಪುಸಲಾಯಿಸಿ ಮತಾಂತರಿಸಲು ಯತ್ನಿಸಿದ್ದಾನೆಂದು ದೂರಿದ್ದಾರೆ.
A Widow Woman who was found missing from Adyarpaduv, Mangalore was found by Konaje Police with a Muslim Man. Bajrang Dal Members alleges it as Love Jihad. Konaje police are investigating the case.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm