ಬ್ರೇಕಿಂಗ್ ನ್ಯೂಸ್
07-11-23 12:56 pm Mangalore Correspondent ಕ್ರೈಂ
ಮಂಗಳೂರು, ನ.6: ನಗರದ ಪಳ್ನೀರ್ ನಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ 3 ಜನ ವ್ಯಕ್ತಿಗಳು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ಕೋಯಿನೂರು ನಿವಾಸಿ ಪ್ರಮೋದ್ ಎಮ್.ಜಿ @ ಡಿಸ್ಕ್ (30), ಮಡಿಕೇರಿ ಕಾನ್ವೆಂಟ್ ಜಂಕ್ಷನ್ ಏರಿಯಾದ ಮೊಹಮ್ಮದ್ ರಾಶೀದ್ ಎಂ.ಝಡ್ @ ರಾಶೀ, (41), ಮಡಿಕೇರಿ ಕಡಗದಾಳು ನಿವಾಸಿ ದರ್ಶನ್ ಎಸ್ (24) ಬಂಧಿತರು. ಇವರಿಂದ 15 ಗ್ರಾಂ MDMA ಮಾದಕ ವಸ್ತು-(75,000/-) OPPO ಕಂಪನಿಯ ಮೊಬೈಲ್ ಪೋನ್, Asus ಕಂಪನಿಯ ಮೊಬೈಲ್ ಪೋನ್-1, ಡಿಜಿಟಲ್ ತೂಕ ಮಾಪನ -1 ವಶಕ್ಕೆ ಪಡೆದಿದ್ದು ಸೊತ್ತುಗಳ ಒಟ್ಟು ಮೌಲ್ಯ- 95,000/- ರೂ. ಆಗಬಹುದು.
ಆರೋಪಿತರಲ್ಲಿ ಪ್ರಮೋದ್ ಎಮ್ ಜಿ @ ಡಿಸ್ಕ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣ ದಾಖಲಾಗಿರುತ್ತವೆ. ಮೊಹಮ್ಮದ್ ರಾಶೀದ್ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕರಣ ದಾಖಲಾಗಿವೆ. ದರ್ಶನ್ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.
The CCB police apprehended three individuals from Madikeri involved in the illicit sale of the narcotic substance MDMA.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am