ಬ್ರೇಕಿಂಗ್ ನ್ಯೂಸ್
11-11-23 02:56 pm Bangalore Correspondent ಕ್ರೈಂ
ಬೆಂಗಳೂರು, ನ 11: ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಸಿಂಥೆಟಿಕ್ ಮಾದಕ ವಸ್ತುಗಳನ್ನು ತಯಾರು ಮಾಡಿದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜಿರಿಯಾ ಮೂಲದ ಬೆಂಜಮೆನ್ ಅಲಿ ಯಾಸ್ ಚಿಡುಬೆಮು(40) ಬಂಧಿತ ಆರೋಪಿ.
ಆರೋಪಿ ದೆಹಲಿ, ಮುಂಬೈನಿಂದ ಕಚ್ಚಾ ಪದಾರ್ಥಗಳನ್ನು ತರಿಸುತ್ತಿದ್ದ. ಬಳಿಕ ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಮಾದಕ ವಸ್ತುಗಳನ್ನು ಸಿದ್ಧಪಡಿಸಿ ದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ.
ಈತನಿಂದ 10 ಕೋಟಿ ರೂ. ಮೌಲ್ಯದ 5 ಕೆ.ಜಿ. ಎಂಡಿಎಂಎ, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ 12 ಕೆ.ಜಿ. 450 ಗ್ರಾಂ ಎಂಎಸ್ಎಂ, 5 ಕೆ.ಜಿ. ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್, 5 ಲೀಟರ್ ಹೈಡ್ರೋ ಕ್ಲೋರಿಕ್ ಆಸಿಡ್, 2.5 ಲೀಟರ್ ಅಸಿಟೋನ್, 5 ಲೀಟರ್ ಕುಕ್ಕರ್, ಗ್ಯಾಸ್ ಸ್ಟವ್, ಸಿಲಿಂಡರ್, 2 ಮೊಬೈಲ್ಗಳು, 2 ತೂಕದ ಯಂತ್ರಗಳು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2021ರಲ್ಲಿ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ನೈಜಿರಿಯಾ ಮೂಲದ ಆರೋಪಿಯ ವೀಸಾ ಅವಧಿ 2022ರಲ್ಲೇ ಮುಕ್ತಾಯಗೊಂಡಿದೆ. ಆದರೂ, ಆರೋಪಿ ಅಕ್ರಮವಾಗಿ ವಾಸವಾಗಿದ್ದಾನೆ. ಬಟ್ಟೆ ವ್ಯಾಪಾರ ಮಾಡುವುದಾಗಿ ಹೇಳಿ ಆವಲಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದ. ಆದರೆ, ಮುಂಬೈ, ದೆಹಲಿ ಮೂಲದ ಸ್ನೇಹಿತರ ಜತೆ ಸೇರಿ ಅಂತಾ ರಾಜ್ಯ ಮತ್ತು ಅಂತಾರಾಷ್ಟ್ರೀಯ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎಂಬುದು ತನಿಖೆ ಯಿಂದ ಬೆಳಕಿಗೆ ಬಂದಿದೆ ಎಂದು ವಿವರಿಸಿದರು.
ಮನೆಯಲ್ಲೇ ಡ್ರಗ್ಸ್ ತಯಾರು ;
ಇತ್ತೀಚೆಗೆ ಆರೋಪಿಯನ್ನು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈತನ ವಿಚಾರಣೆಯಲ್ಲಿ ಮನೆಯಲ್ಲೇ ಡ್ರಗ್ಸ್ ತಯಾರು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂಬೈ, ದೆಹಲಿಯಲ್ಲಿರುವ ಸ್ನೇಹಿತರು ಹಾಗೂ ವಿದೇಶಿ ಪ್ರಜೆಗಳಿಂದ ಕಚ್ಚಾ ವಸ್ತುಗಳನ್ನು ಕೋರಿಯರ್ಗಳ ಮೂಲಕ ತರಿಸಿಕೊಳ್ಳುತ್ತಿದ್ದ. ಬಳಿಕ ಅವುಗಳನ್ನು ಯುಟ್ಯೂಬ್, ಆನ್ಲೈನ್ ಮೂಲಕ ಮಾಹಿತಿ ಪಡೆದು ಅಡುಗೆ ಮಾಡುವ ಕುಕ್ಕರ್ನಿಂದ ತಯಾರು ಮಾಡಿ, ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋರಿಯರ್ ಮೂಲಕವೇ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು. ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
Bengalore police arrest Nigerian national who cooked drugs in house and parcels it in cookers.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 07:38 pm
Mangalore Correspondent
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am