ಬ್ರೇಕಿಂಗ್ ನ್ಯೂಸ್
11-11-23 02:56 pm Bangalore Correspondent ಕ್ರೈಂ
ಬೆಂಗಳೂರು, ನ 11: ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಸಿಂಥೆಟಿಕ್ ಮಾದಕ ವಸ್ತುಗಳನ್ನು ತಯಾರು ಮಾಡಿದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜಿರಿಯಾ ಮೂಲದ ಬೆಂಜಮೆನ್ ಅಲಿ ಯಾಸ್ ಚಿಡುಬೆಮು(40) ಬಂಧಿತ ಆರೋಪಿ.
ಆರೋಪಿ ದೆಹಲಿ, ಮುಂಬೈನಿಂದ ಕಚ್ಚಾ ಪದಾರ್ಥಗಳನ್ನು ತರಿಸುತ್ತಿದ್ದ. ಬಳಿಕ ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಮಾದಕ ವಸ್ತುಗಳನ್ನು ಸಿದ್ಧಪಡಿಸಿ ದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ.


ಈತನಿಂದ 10 ಕೋಟಿ ರೂ. ಮೌಲ್ಯದ 5 ಕೆ.ಜಿ. ಎಂಡಿಎಂಎ, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ 12 ಕೆ.ಜಿ. 450 ಗ್ರಾಂ ಎಂಎಸ್ಎಂ, 5 ಕೆ.ಜಿ. ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್, 5 ಲೀಟರ್ ಹೈಡ್ರೋ ಕ್ಲೋರಿಕ್ ಆಸಿಡ್, 2.5 ಲೀಟರ್ ಅಸಿಟೋನ್, 5 ಲೀಟರ್ ಕುಕ್ಕರ್, ಗ್ಯಾಸ್ ಸ್ಟವ್, ಸಿಲಿಂಡರ್, 2 ಮೊಬೈಲ್ಗಳು, 2 ತೂಕದ ಯಂತ್ರಗಳು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2021ರಲ್ಲಿ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ನೈಜಿರಿಯಾ ಮೂಲದ ಆರೋಪಿಯ ವೀಸಾ ಅವಧಿ 2022ರಲ್ಲೇ ಮುಕ್ತಾಯಗೊಂಡಿದೆ. ಆದರೂ, ಆರೋಪಿ ಅಕ್ರಮವಾಗಿ ವಾಸವಾಗಿದ್ದಾನೆ. ಬಟ್ಟೆ ವ್ಯಾಪಾರ ಮಾಡುವುದಾಗಿ ಹೇಳಿ ಆವಲಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದ. ಆದರೆ, ಮುಂಬೈ, ದೆಹಲಿ ಮೂಲದ ಸ್ನೇಹಿತರ ಜತೆ ಸೇರಿ ಅಂತಾ ರಾಜ್ಯ ಮತ್ತು ಅಂತಾರಾಷ್ಟ್ರೀಯ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎಂಬುದು ತನಿಖೆ ಯಿಂದ ಬೆಳಕಿಗೆ ಬಂದಿದೆ ಎಂದು ವಿವರಿಸಿದರು.
ಮನೆಯಲ್ಲೇ ಡ್ರಗ್ಸ್ ತಯಾರು ;
ಇತ್ತೀಚೆಗೆ ಆರೋಪಿಯನ್ನು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈತನ ವಿಚಾರಣೆಯಲ್ಲಿ ಮನೆಯಲ್ಲೇ ಡ್ರಗ್ಸ್ ತಯಾರು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂಬೈ, ದೆಹಲಿಯಲ್ಲಿರುವ ಸ್ನೇಹಿತರು ಹಾಗೂ ವಿದೇಶಿ ಪ್ರಜೆಗಳಿಂದ ಕಚ್ಚಾ ವಸ್ತುಗಳನ್ನು ಕೋರಿಯರ್ಗಳ ಮೂಲಕ ತರಿಸಿಕೊಳ್ಳುತ್ತಿದ್ದ. ಬಳಿಕ ಅವುಗಳನ್ನು ಯುಟ್ಯೂಬ್, ಆನ್ಲೈನ್ ಮೂಲಕ ಮಾಹಿತಿ ಪಡೆದು ಅಡುಗೆ ಮಾಡುವ ಕುಕ್ಕರ್ನಿಂದ ತಯಾರು ಮಾಡಿ, ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋರಿಯರ್ ಮೂಲಕವೇ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು. ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
Bengalore police arrest Nigerian national who cooked drugs in house and parcels it in cookers.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am