ಬ್ರೇಕಿಂಗ್ ನ್ಯೂಸ್
11-11-23 02:56 pm Bangalore Correspondent ಕ್ರೈಂ
ಬೆಂಗಳೂರು, ನ 11: ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಸಿಂಥೆಟಿಕ್ ಮಾದಕ ವಸ್ತುಗಳನ್ನು ತಯಾರು ಮಾಡಿದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜಿರಿಯಾ ಮೂಲದ ಬೆಂಜಮೆನ್ ಅಲಿ ಯಾಸ್ ಚಿಡುಬೆಮು(40) ಬಂಧಿತ ಆರೋಪಿ.
ಆರೋಪಿ ದೆಹಲಿ, ಮುಂಬೈನಿಂದ ಕಚ್ಚಾ ಪದಾರ್ಥಗಳನ್ನು ತರಿಸುತ್ತಿದ್ದ. ಬಳಿಕ ಅಡುಗೆ ಮಾಡುವ ಪ್ರಷರ್ ಕುಕ್ಕರ್ನಲ್ಲಿ ಮಾದಕ ವಸ್ತುಗಳನ್ನು ಸಿದ್ಧಪಡಿಸಿ ದೇಶ- ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ.


ಈತನಿಂದ 10 ಕೋಟಿ ರೂ. ಮೌಲ್ಯದ 5 ಕೆ.ಜಿ. ಎಂಡಿಎಂಎ, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ 12 ಕೆ.ಜಿ. 450 ಗ್ರಾಂ ಎಂಎಸ್ಎಂ, 5 ಕೆ.ಜಿ. ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್, 5 ಲೀಟರ್ ಹೈಡ್ರೋ ಕ್ಲೋರಿಕ್ ಆಸಿಡ್, 2.5 ಲೀಟರ್ ಅಸಿಟೋನ್, 5 ಲೀಟರ್ ಕುಕ್ಕರ್, ಗ್ಯಾಸ್ ಸ್ಟವ್, ಸಿಲಿಂಡರ್, 2 ಮೊಬೈಲ್ಗಳು, 2 ತೂಕದ ಯಂತ್ರಗಳು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2021ರಲ್ಲಿ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ನೈಜಿರಿಯಾ ಮೂಲದ ಆರೋಪಿಯ ವೀಸಾ ಅವಧಿ 2022ರಲ್ಲೇ ಮುಕ್ತಾಯಗೊಂಡಿದೆ. ಆದರೂ, ಆರೋಪಿ ಅಕ್ರಮವಾಗಿ ವಾಸವಾಗಿದ್ದಾನೆ. ಬಟ್ಟೆ ವ್ಯಾಪಾರ ಮಾಡುವುದಾಗಿ ಹೇಳಿ ಆವಲಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದ. ಆದರೆ, ಮುಂಬೈ, ದೆಹಲಿ ಮೂಲದ ಸ್ನೇಹಿತರ ಜತೆ ಸೇರಿ ಅಂತಾ ರಾಜ್ಯ ಮತ್ತು ಅಂತಾರಾಷ್ಟ್ರೀಯ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎಂಬುದು ತನಿಖೆ ಯಿಂದ ಬೆಳಕಿಗೆ ಬಂದಿದೆ ಎಂದು ವಿವರಿಸಿದರು.
ಮನೆಯಲ್ಲೇ ಡ್ರಗ್ಸ್ ತಯಾರು ;
ಇತ್ತೀಚೆಗೆ ಆರೋಪಿಯನ್ನು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈತನ ವಿಚಾರಣೆಯಲ್ಲಿ ಮನೆಯಲ್ಲೇ ಡ್ರಗ್ಸ್ ತಯಾರು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮುಂಬೈ, ದೆಹಲಿಯಲ್ಲಿರುವ ಸ್ನೇಹಿತರು ಹಾಗೂ ವಿದೇಶಿ ಪ್ರಜೆಗಳಿಂದ ಕಚ್ಚಾ ವಸ್ತುಗಳನ್ನು ಕೋರಿಯರ್ಗಳ ಮೂಲಕ ತರಿಸಿಕೊಳ್ಳುತ್ತಿದ್ದ. ಬಳಿಕ ಅವುಗಳನ್ನು ಯುಟ್ಯೂಬ್, ಆನ್ಲೈನ್ ಮೂಲಕ ಮಾಹಿತಿ ಪಡೆದು ಅಡುಗೆ ಮಾಡುವ ಕುಕ್ಕರ್ನಿಂದ ತಯಾರು ಮಾಡಿ, ಗ್ರಾಹಕರ ಬೇಡಿಕೆಗೆ ತಕ್ಕಂತೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋರಿಯರ್ ಮೂಲಕವೇ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು. ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
Bengalore police arrest Nigerian national who cooked drugs in house and parcels it in cookers.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm