ಬ್ರೇಕಿಂಗ್ ನ್ಯೂಸ್
14-11-23 02:43 pm HK News Desk ಕ್ರೈಂ
ಎರ್ನಾಕುಲಂ, ನ.14: ಜುಲೈ 28ರಂದು ಕೇರಳದ ಆಳುವದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಅಶ್ಫಾಕ್ ಆಲಂಗೆ ಎರ್ನಾಕುಲಂ ಪೋಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.
ವಿಚಾರಣೆಯ ನೇತೃತ್ವ ವಹಿಸಿದ್ದ ನ್ಯಾ. ಕೆ. ಸೋಮನ್ ಅವರು ನವೆಂಬರ್ 14ರಂದು ತಮ್ಮ ತೀರ್ಪನ್ನು ಪ್ರಕಟಿಸಿದರು. ಪ್ರಾಥಮಿಕ ಮಾಹಿತಿ ವರದಿ ದಾಖಲಾದ 30 ದಿನಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿದ್ದ ಪೊಲೀಸರು, ನ್ಯಾಯಾಲಯದೆದುರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
28 ವರ್ಷದ ಆರೋಪಿ ಆಲಂ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳಾದ 302 (ಹತ್ಯೆ), 376 2(ಜೆ) (ಅಪ್ರಾಪ್ತ ಬಾಲಕಿಯ ಅತ್ಯಾಚಾರ), 366ಎ (ಅಪ್ರಾಪ್ತ ಬಾಲಕಿಯನ್ನು ಹೊತ್ತುಕೊಂಡು ಹೋಗುವುದು) ಹಾಗೂ 364 (ಹತ್ಯೆಗೈಯ್ಯುವ ಉದ್ದೇಶದಿಂದ ಅಪಹರಣ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದಲ್ಲದೆ, ಬಿಹಾರದ ವಲಸೆ ಕಾರ್ಮಿಕನಾದ ಆಲಂ ವಿರುದ್ಧ ಪೋಕ್ಸೊ ಕಾಯ್ದೆ, ಬಾಲ ನ್ಯಾಯ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಅಕ್ಟೋಬರ್ 4ರಂದು ಪ್ರಾರಂಭವಾಗಿದ್ದ ವಿಚಾರಣೆಯು ಕೇವಲ 26 ದಿನಗಳಲ್ಲಿ ಮುಕ್ತಾಯಗೊಂಡಿತು. ಮೃತ ಬಾಲಕಿಯು ಬಿಹಾರದ ದಂಪತಿಯ ಪುತ್ರಿಯಾಗಿದ್ದಳು. ಆಕೆಯ ಮೃತದೇಹವು ಜುಲೈ 29ರಂದು ಆಳುವ ಮಾರುಕಟ್ಟೆಯ ಹಿಂಭಾಗದ ಜೌಗು ಪ್ರದೇಶವೊಂದರಲ್ಲಿ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ 41 ಸಾಕ್ಷಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು ಹಾಗೂ 13 ದೋಷಾರೋಪಗಳಲ್ಲಿ ಆಲಂ ಅಪರಾಧಿ ಎಂಬ ಸಂಗತಿಯನ್ನು ನ್ಯಾಯಾಲಯ ಪತ್ತೆ ಹಚ್ಚಿತ್ತು.
ಅಪರಾಧಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ಆಗ್ರಹಿಸಿತ್ತು. ಮೃತ ಬಾಲಕಿಯ ಪೋಷಕರೂ ಕೂಡಾ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಅಪರಾಧಿಗೆ ಮರಣ ದಂಡನೆ ವಿಧಿಸಬೇಕು ಎಂದು ಮನವಿ ಮಾಡಿದ್ದರು.
ಆಲಂಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿ ಮರಣ ದಂಡನೆಯನ್ನು ವಿಧಿಸಿದರೆ, ಪೋಕ್ಸೊ ಕಾಯ್ದೆಯ ಸೆಕ್ಷನ್ ಗಳಡಿ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಆಲಂ ಯಾವುದೇ ಅನುಕಂಪಕ್ಕೆ ಅರ್ಹನಲ್ಲ ಎಂದು ಈ ತೀರ್ಪನ್ನು ಪ್ರಕಟಿಸುವಾಗ ನ್ಯಾಯಾಲಯವು ಅಭಿಪ್ರಾಯ ಪಟ್ಟಿತು.
An Ernakulam sessions court today awarded the death sentence to one Ashfaq Alam for the rape and murder of a five-year-old child in Aluva. Additional District and Sessions Judge K Soman who hears cases concerning offences under the Protection of Children from Sexual Offences Act (POCSO Act) pronounced the sentence today after having convicted Alam for the crime on November 4.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm