ಬ್ರೇಕಿಂಗ್ ನ್ಯೂಸ್
14-11-23 02:43 pm HK News Desk ಕ್ರೈಂ
ಎರ್ನಾಕುಲಂ, ನ.14: ಜುಲೈ 28ರಂದು ಕೇರಳದ ಆಳುವದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಅಶ್ಫಾಕ್ ಆಲಂಗೆ ಎರ್ನಾಕುಲಂ ಪೋಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.
ವಿಚಾರಣೆಯ ನೇತೃತ್ವ ವಹಿಸಿದ್ದ ನ್ಯಾ. ಕೆ. ಸೋಮನ್ ಅವರು ನವೆಂಬರ್ 14ರಂದು ತಮ್ಮ ತೀರ್ಪನ್ನು ಪ್ರಕಟಿಸಿದರು. ಪ್ರಾಥಮಿಕ ಮಾಹಿತಿ ವರದಿ ದಾಖಲಾದ 30 ದಿನಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿದ್ದ ಪೊಲೀಸರು, ನ್ಯಾಯಾಲಯದೆದುರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
28 ವರ್ಷದ ಆರೋಪಿ ಆಲಂ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳಾದ 302 (ಹತ್ಯೆ), 376 2(ಜೆ) (ಅಪ್ರಾಪ್ತ ಬಾಲಕಿಯ ಅತ್ಯಾಚಾರ), 366ಎ (ಅಪ್ರಾಪ್ತ ಬಾಲಕಿಯನ್ನು ಹೊತ್ತುಕೊಂಡು ಹೋಗುವುದು) ಹಾಗೂ 364 (ಹತ್ಯೆಗೈಯ್ಯುವ ಉದ್ದೇಶದಿಂದ ಅಪಹರಣ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದಲ್ಲದೆ, ಬಿಹಾರದ ವಲಸೆ ಕಾರ್ಮಿಕನಾದ ಆಲಂ ವಿರುದ್ಧ ಪೋಕ್ಸೊ ಕಾಯ್ದೆ, ಬಾಲ ನ್ಯಾಯ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಅಕ್ಟೋಬರ್ 4ರಂದು ಪ್ರಾರಂಭವಾಗಿದ್ದ ವಿಚಾರಣೆಯು ಕೇವಲ 26 ದಿನಗಳಲ್ಲಿ ಮುಕ್ತಾಯಗೊಂಡಿತು. ಮೃತ ಬಾಲಕಿಯು ಬಿಹಾರದ ದಂಪತಿಯ ಪುತ್ರಿಯಾಗಿದ್ದಳು. ಆಕೆಯ ಮೃತದೇಹವು ಜುಲೈ 29ರಂದು ಆಳುವ ಮಾರುಕಟ್ಟೆಯ ಹಿಂಭಾಗದ ಜೌಗು ಪ್ರದೇಶವೊಂದರಲ್ಲಿ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ 41 ಸಾಕ್ಷಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು ಹಾಗೂ 13 ದೋಷಾರೋಪಗಳಲ್ಲಿ ಆಲಂ ಅಪರಾಧಿ ಎಂಬ ಸಂಗತಿಯನ್ನು ನ್ಯಾಯಾಲಯ ಪತ್ತೆ ಹಚ್ಚಿತ್ತು.
ಅಪರಾಧಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ಆಗ್ರಹಿಸಿತ್ತು. ಮೃತ ಬಾಲಕಿಯ ಪೋಷಕರೂ ಕೂಡಾ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಅಪರಾಧಿಗೆ ಮರಣ ದಂಡನೆ ವಿಧಿಸಬೇಕು ಎಂದು ಮನವಿ ಮಾಡಿದ್ದರು.
ಆಲಂಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿ ಮರಣ ದಂಡನೆಯನ್ನು ವಿಧಿಸಿದರೆ, ಪೋಕ್ಸೊ ಕಾಯ್ದೆಯ ಸೆಕ್ಷನ್ ಗಳಡಿ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಆಲಂ ಯಾವುದೇ ಅನುಕಂಪಕ್ಕೆ ಅರ್ಹನಲ್ಲ ಎಂದು ಈ ತೀರ್ಪನ್ನು ಪ್ರಕಟಿಸುವಾಗ ನ್ಯಾಯಾಲಯವು ಅಭಿಪ್ರಾಯ ಪಟ್ಟಿತು.
An Ernakulam sessions court today awarded the death sentence to one Ashfaq Alam for the rape and murder of a five-year-old child in Aluva. Additional District and Sessions Judge K Soman who hears cases concerning offences under the Protection of Children from Sexual Offences Act (POCSO Act) pronounced the sentence today after having convicted Alam for the crime on November 4.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm