ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am