ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.

ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 03:06 pm
HK News Staffer
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am