ಬ್ರೇಕಿಂಗ್ ನ್ಯೂಸ್
22-11-23 12:12 pm HK News Desk ಕ್ರೈಂ
ಮಹಾರಾಷ್ಟ್ರ, ನ 22: ಏಕದಿನ ವಿಶ್ವಕಪ್ನಲ್ಲಿ ಭಾರತ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳಿಗೆ ನವೆಂಬರ್ 19 ಅತ್ಯಂತ ಕೆಟ್ಟ ದಿನವಾಗಿದೆ. ಟೀಂ ಇಂಡಿಯಾವನ್ನು ಸೋಲಿಸಿದ ಆಸ್ಟ್ರೇಲಿಯಾ ಚಾಂಪಿಯನ್ ಆಗಿದ್ದು ಅಸಾಧ್ಯ ಬೇಸರ ತಂದಿದೆ. ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದ್ದು, ಕೆಲ ಅನಾಹುತಗಳಿಗೂ ದಾರಿ ಮಾಡಿಕೊಟ್ಟಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಭಾರತ ಫೈನಲ್ನಲ್ಲಿ ಸೋತಿದ್ದರಿಂದ ಹಿರಿಯ ಪುತ್ರನೊಬ್ಬ ತನ್ನ ತಂದೆ ಮತ್ತು ಕಿರಿಯ ಸಹೋದರನ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಹೋದರ ಅಂಕಿತ್ ಇಂಗೋಲ್ ಮೃತಪಟ್ಟಿದ್ದು, ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಘಾತಕಾರಿ ಘಟನೆ ಎಲ್ಲೆಡೆ ಸಂಚಲನ ಮೂಡಿಸಿದ್ದು, ಬದನೇರಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಮೃತ ಅಂಕಿತ್ ಇಂಗೋಲ್ ಮತ್ತು ಆರೋಪಿ ಪ್ರವೀಣ್ ಇಂಗೋಲ್, ಈತನ ತಂದೆ ರಮೇಶ ಇಂಗೋಳೆ ಮೂವರೂ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಫೈನಲ್ ಪಂದ್ಯವನ್ನು ಮನೆಯಲ್ಲಿ ಟಿವಿಯಲ್ಲಿ ವೀಕ್ಷಿಸಿದ್ದಾರೆ. ಪಂದ್ಯದ ನೋಡುತ್ತಿದ್ದಾಗಲೇ ಮೂವರು ಮದ್ಯಪಾನ ಮಾಡಿದ್ದಾರೆ ಎಂದು ಹೇಳಲಾಗಿದೆ.
ಭಾರತ ಪಂದ್ಯ ಸೋತಿದ್ದರಿಂದ ರಾತ್ರಿ ಇಬ್ಬರು ಸಹೋದರರ ಮಧ್ಯೆ ಕಿತ್ತಾಟ ನಡೆದಿದೆ. ನೀನು ಮಟನ್ (ಕುರಿ ಮಾಂಸ) ತಿಂದ ಕಾರಣ ಟೀಂ ಇಂಡಿಯಾ ಸೋಲು ಕಂಡಿತು ಎಂದು ಹಿರಿಯ ಸಹೋದರ ಪ್ರವೀಣ್, ತಮ್ಮನೊಂದಿಗೆ ಜಗಳ ಕಾದಿದ್ದಾನೆ. ಇಬ್ಬರ ಜಗಳ ಬಿಡಿಸಲು ತಂದೆ ರಮೇಶ್ ಮಧ್ಯಪ್ರವೇಶಿಸಿ ಪ್ರವೀಣನ ಮೊಬೈಲ್ ಕಸಿದುಕೊಂಡಿದ್ದಾನೆ. ಇಷ್ಟಕ್ಕೆ ಕುಪಿತನಾದ ಆರೋಪಿ ಮನೆಯಲ್ಲಿದ್ದ ಕಬ್ಬಿಣದ ರಾಡ್ನಿಂದ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.
ತಲೆಗೆ ಗಂಭೀರ ಗಾಯವಾಗಿ ಕಿರಿಯ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಗೂ ರಾಡ್ನಿಂದ ಹೊಡೆದಿದ್ದಾನೆ. ಇದರಿಂದ ಅವರ ತೀವ್ರ ಗಾಯಗೊಂಡಿದ್ದಾರೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಇಬ್ಬರ ಮೇಲೆ ದಾಳಿ ಮಾಡಿ ತಮ್ಮನನ್ನು ಬಲಿಪಡೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
According to the information received, the elder son attacked his father and younger brother with an iron rod. Ankit Ingole, who was seriously injured in the incident, died, while the father’s condition is still critical. This heart-wrenching incident has spread sensation everywhere. In this case, Badnera police have registered a case of murder and arrested the accused.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm