ಬ್ರೇಕಿಂಗ್ ನ್ಯೂಸ್
24-11-23 07:06 pm Mangalore Correspondent ಕ್ರೈಂ
ಉಳ್ಳಾಲ, ನ.24: ಮೈಯಿಡೀ ಚಿನ್ನವನ್ನ ಹೋಲುವ ಒನ್ ಗ್ರಾಮ್ ಒಡವೆಗಳನ್ನ ಹಾಕಿದ್ದ ವ್ಯಕ್ತಿಯೋರ್ವ ಕಳೆದ ತಿಂಗಳು ತೊಕ್ಕೊಟ್ಟಿನ ಎರಡು ಅಂಗಡಿಗಳಿಗೆ ವಂಚಿಸಿದ ಪ್ರಕರಣ ನಡೆದ ಬೆನ್ನಲ್ಲೇ ಅದೇ ಶೋಕಿಲಾಲ ಕುತ್ತಾರು ಪಂಡಿತ್ ಹೌಸ್ನ ಮೊಬೈಲ್ ಮಳಿಗೆಯಲ್ಲಿ ಮೊಬೈಲ್ ಖರೀದಿಸಿ ಫೋನ್ ಸ್ವಿಚ್ ಆಫ್ ಆಗಿದೆ, ಗೂಗಲ್ ಪೇ ಮಾಡಲು ಆಗುವುದಿಲ್ಲ, ನಾಳೆ ಹಣ ಕೊಡುವುದಾಗಿ ಹೇಳಿ ವಂಚಿಸಿದ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಖತರ್ನಾಕ್ ವಂಚಕ ಗೂಡ್ಸ್ ಮುನೀರನ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಅಯ್ಯಂಗಾರ್ ಬೇಕರಿ ಮತ್ತು ಸಮೀಪದ ಪೂರ್ಣಿಮಾ ಎಂಬವರ ದಿನಸಿ ಅಂಗಡಿಗೆ ಮೈಯಿಡೀ ಚಿನ್ನದ ಒಡವೆ ಧರಿಸಿದ್ದ ವ್ಯಕ್ತಿಯೋರ್ವ ಹೆಲ್ಮೆಟ್ ತೆಗೆಯದೆ ತಾನು ನಿತಿನ್ ಶೆಟ್ಟಿ ಎಂದು ಪರಿಚಯಿಸಿ ಸಾವಿರಾರು ರೂಪಾಯಿ ಮೌಲ್ಯದ ಸಿಹಿ ತಿಂಡಿ, ದಿನಸಿ ಖರೀದಿಸಿ ಗೂಗಲ್ ಪೇ ಮಾಡಲು ಫೋನ್ ಸ್ವಿಚ್ ಆಫ್ ಆಗಿದೆ, ಈಗಲೇ ಹಣ ತಂದು ಕೊಡುವೆ ಎಂದು ಹೇಳಿ ವ್ಯಾಪಾರಿಗಳನ್ನ ಯಾಮಾರಿಸಿದ್ದ. ಅದೇ ಶೋಕಿಲಾಲ ಕಳೆದ ನವೆಂಬರ್ 13 ರಂದು ಮತ್ತೆ ಕುತ್ತಾರು ಪಂಡಿತ್ ಹೌಸ್ ನಲ್ಲಿರುವ "ಸುಧಿ ಕಲೆಕ್ಷನ್" ಎಂಬ ಮೊಬೈಲ್ ಅಂಗಡಿಗೆ ತೆರಳಿ ಮಾಲಕ ದೀಪಕ್ ಅವರಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲನ್ನ ಖರೀದಿಸಿ ಗೂಗಲ್ ಪೇ ಮಾಡಲು ತನ್ನ ಮೊಬೈಲ್ ಸ್ವಿಚ್ ಆಫ್ ಎಂದು ಸಬೂಬು ನೀಡಿದ್ದು ನನ್ನ ಮನೆ ಸಮೀಪದಲ್ಲೇ ಇದೆ, ನಾಳೆ ಹಣ ನೀಡೋದಾಗಿ ತನ್ನ ಸಂಪರ್ಕದ ಮೊಬೈಲ್ ನಂಬರ್ ನೀಡಿ ತೆರಳಿದ್ದ.


ದೀಪಕ್ ಅವರು ವಂಚಕ ನೀಡಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ತಾನು ಮೋಸ ಹೋಗಿರುವುದು ತಿಳಿದ ಮೇಲೆ ಮೊಬೈಲ್ ನಂಬರಿನ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಅದು ಖತರ್ನಾಕ್ ವಂಚಕ ಗೂಡ್ಸ್ ಮುನೀರನದೆಂದು ತಿಳಿದುಬಂದಿದೆ. ಗೂಡ್ಸ್ ಮುನೀರನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ವಂಚನೆ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈತ ಈಗ ಡಮ್ಮಿ ಒಡವೆಗಳನ್ನ ಧರಿಸಿ ಅಮಾಯಕರನ್ನ ಯಾಮಾರಿಸಿ ವಂಚಿಸುವ ಖಯಾಲಿ ಬೆಳೆಸಿದ್ದಾನೆ. ಮೂಲತಃ ಕಸಬಾ ಬೆಂಗ್ರೆ ನಿವಾಸಿಯಾಗಿರೋ ಈತ ತೊಕ್ಕೊಟ್ಟು ಆಸುಪಾಸಿನಲ್ಲೇ ಬಿಡಾರ ಹೂಡಿರುವ ಶಂಕೆ ಇದೆ. ಉಳ್ಳಾಲ ಪೊಲೀಸರು ಆದಷ್ಟು ಬೇಗನೆ ಈತನ ಹೆಡೆಮುರಿ ಕಟ್ಟ ಬೇಕೆಂದು ವಂಚನೆಗೊಳಗಾದ ದೀಪಕ್ ಒತ್ತಾಯಿಸಿದ್ದಾರೆ.
Mangalore Ullal police arrest one for Cheating bakery and shops of money.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm