ಬ್ರೇಕಿಂಗ್ ನ್ಯೂಸ್
24-11-23 07:06 pm Mangalore Correspondent ಕ್ರೈಂ
ಉಳ್ಳಾಲ, ನ.24: ಮೈಯಿಡೀ ಚಿನ್ನವನ್ನ ಹೋಲುವ ಒನ್ ಗ್ರಾಮ್ ಒಡವೆಗಳನ್ನ ಹಾಕಿದ್ದ ವ್ಯಕ್ತಿಯೋರ್ವ ಕಳೆದ ತಿಂಗಳು ತೊಕ್ಕೊಟ್ಟಿನ ಎರಡು ಅಂಗಡಿಗಳಿಗೆ ವಂಚಿಸಿದ ಪ್ರಕರಣ ನಡೆದ ಬೆನ್ನಲ್ಲೇ ಅದೇ ಶೋಕಿಲಾಲ ಕುತ್ತಾರು ಪಂಡಿತ್ ಹೌಸ್ನ ಮೊಬೈಲ್ ಮಳಿಗೆಯಲ್ಲಿ ಮೊಬೈಲ್ ಖರೀದಿಸಿ ಫೋನ್ ಸ್ವಿಚ್ ಆಫ್ ಆಗಿದೆ, ಗೂಗಲ್ ಪೇ ಮಾಡಲು ಆಗುವುದಿಲ್ಲ, ನಾಳೆ ಹಣ ಕೊಡುವುದಾಗಿ ಹೇಳಿ ವಂಚಿಸಿದ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಖತರ್ನಾಕ್ ವಂಚಕ ಗೂಡ್ಸ್ ಮುನೀರನ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಅಯ್ಯಂಗಾರ್ ಬೇಕರಿ ಮತ್ತು ಸಮೀಪದ ಪೂರ್ಣಿಮಾ ಎಂಬವರ ದಿನಸಿ ಅಂಗಡಿಗೆ ಮೈಯಿಡೀ ಚಿನ್ನದ ಒಡವೆ ಧರಿಸಿದ್ದ ವ್ಯಕ್ತಿಯೋರ್ವ ಹೆಲ್ಮೆಟ್ ತೆಗೆಯದೆ ತಾನು ನಿತಿನ್ ಶೆಟ್ಟಿ ಎಂದು ಪರಿಚಯಿಸಿ ಸಾವಿರಾರು ರೂಪಾಯಿ ಮೌಲ್ಯದ ಸಿಹಿ ತಿಂಡಿ, ದಿನಸಿ ಖರೀದಿಸಿ ಗೂಗಲ್ ಪೇ ಮಾಡಲು ಫೋನ್ ಸ್ವಿಚ್ ಆಫ್ ಆಗಿದೆ, ಈಗಲೇ ಹಣ ತಂದು ಕೊಡುವೆ ಎಂದು ಹೇಳಿ ವ್ಯಾಪಾರಿಗಳನ್ನ ಯಾಮಾರಿಸಿದ್ದ. ಅದೇ ಶೋಕಿಲಾಲ ಕಳೆದ ನವೆಂಬರ್ 13 ರಂದು ಮತ್ತೆ ಕುತ್ತಾರು ಪಂಡಿತ್ ಹೌಸ್ ನಲ್ಲಿರುವ "ಸುಧಿ ಕಲೆಕ್ಷನ್" ಎಂಬ ಮೊಬೈಲ್ ಅಂಗಡಿಗೆ ತೆರಳಿ ಮಾಲಕ ದೀಪಕ್ ಅವರಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲನ್ನ ಖರೀದಿಸಿ ಗೂಗಲ್ ಪೇ ಮಾಡಲು ತನ್ನ ಮೊಬೈಲ್ ಸ್ವಿಚ್ ಆಫ್ ಎಂದು ಸಬೂಬು ನೀಡಿದ್ದು ನನ್ನ ಮನೆ ಸಮೀಪದಲ್ಲೇ ಇದೆ, ನಾಳೆ ಹಣ ನೀಡೋದಾಗಿ ತನ್ನ ಸಂಪರ್ಕದ ಮೊಬೈಲ್ ನಂಬರ್ ನೀಡಿ ತೆರಳಿದ್ದ.


ದೀಪಕ್ ಅವರು ವಂಚಕ ನೀಡಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ತಾನು ಮೋಸ ಹೋಗಿರುವುದು ತಿಳಿದ ಮೇಲೆ ಮೊಬೈಲ್ ನಂಬರಿನ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಅದು ಖತರ್ನಾಕ್ ವಂಚಕ ಗೂಡ್ಸ್ ಮುನೀರನದೆಂದು ತಿಳಿದುಬಂದಿದೆ. ಗೂಡ್ಸ್ ಮುನೀರನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ವಂಚನೆ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈತ ಈಗ ಡಮ್ಮಿ ಒಡವೆಗಳನ್ನ ಧರಿಸಿ ಅಮಾಯಕರನ್ನ ಯಾಮಾರಿಸಿ ವಂಚಿಸುವ ಖಯಾಲಿ ಬೆಳೆಸಿದ್ದಾನೆ. ಮೂಲತಃ ಕಸಬಾ ಬೆಂಗ್ರೆ ನಿವಾಸಿಯಾಗಿರೋ ಈತ ತೊಕ್ಕೊಟ್ಟು ಆಸುಪಾಸಿನಲ್ಲೇ ಬಿಡಾರ ಹೂಡಿರುವ ಶಂಕೆ ಇದೆ. ಉಳ್ಳಾಲ ಪೊಲೀಸರು ಆದಷ್ಟು ಬೇಗನೆ ಈತನ ಹೆಡೆಮುರಿ ಕಟ್ಟ ಬೇಕೆಂದು ವಂಚನೆಗೊಳಗಾದ ದೀಪಕ್ ಒತ್ತಾಯಿಸಿದ್ದಾರೆ.
Mangalore Ullal police arrest one for Cheating bakery and shops of money.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm