ಬ್ರೇಕಿಂಗ್ ನ್ಯೂಸ್
25-11-23 06:18 pm Mangalore Correspondent ಕ್ರೈಂ
ಮಂಗಳೂರು, ನ.25: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು(37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.
ನ.25 ರಂದು ಮಂಗಳೂರು ನಗರದ ಪಂಪ್ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್, 1,57,50,000/-) REDMI ಕಂಪನಿಯ ಮೊಬೈಲ್ ಫೋನ್ -1 (10,000/-) ಕೆಎ-25-MG-0625 ನೇ ಸಿಲ್ವರ್ ಬಣ್ಣದ ಸ್ವಿಫ್ಟ್ (5,00,000/-) MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-) ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
Also Read: ಮಂಗಳೂರು ಸಿಸಿಬಿ ಮೇಜರ್ ಕಾರ್ಯಾಚರಣೆ ; ಎಂಟು ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಇಬ್ಬರ ಬಂಧನ
After 7 crore worh Ambergris seized by Mangalore CCB Police, another 1.5 crore Ambergris seized at Pumpwell in which three have been arretsed. 7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am