ಬ್ರೇಕಿಂಗ್ ನ್ಯೂಸ್
25-11-23 09:56 pm Mangalore Correspondent ಕ್ರೈಂ
ಮಂಗಳೂರು, ನ.25: ಸ್ಕಾರ್ಪಿಯೋ ಕಾರು ಚಾಲಕನೊಬ್ಬ ಮಧ್ಯರಾತ್ರಿ ಬೈಕಿಗೆ ಡಿಕ್ಕಿಯಾಗಿ ಸವಾರ ನೆಲಕ್ಕುರುಳಿದರೂ ಸ್ಥಳದಿಂದ ಪರಾರಿಯಾದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಗೆ ಬಿದ್ದ ಬೈಕ್ ಸವಾರನನ್ನು ಇತರೇ ಕಾರು ಚಾಲಕರು ಕಂಡರೂ ಕಾಣದೆ ನಿರ್ಲಕ್ಷ್ಯ ತೋರಿದ್ದಾರೆ.
ನ.21ರಂದು ನಡುರಾತ್ರಿ 12.15ರ ಸುಮಾರಿಗೆ ಘಟನೆ ನಡೆದಿದ್ದು ಸವಾರ ಬೊಂದೇಲ್ ನಿವಾಸಿ ಆಲಿಸ್ಟರ್ ತೌರೊ (24) ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫಂಕ್ಷನ್ ಮುಗಿಸಿ ನಡುರಾತ್ರಿಯಲ್ಲಿ ಬೈಕಿನಲ್ಲಿ ಮನೆಯತ್ತ ಹೊರಟಿದ್ದರೆ, ಯೆಯ್ಯಾಡಿ ಬಳಿ ಸ್ಕಾರ್ಪಿಯೊ ಚಾಲಕ ನೇರವಾಗಿ ತಿರುವು ಪಡೆದಿದ್ದ. ಇದನ್ನು ಗಮನಿಸದೆ ಬೈಕ್ ನೇರವಾಗಿ ಡಿಕ್ಕಿಯಾಗಿದ್ದು ರಸ್ತೆಗೆ ಎಸೆಯಲ್ಪಟ್ಟ ಸವಾರ ಆಲಿಸ್ಟರ್ ತೌರೊ ಮತ್ತು ಹಿಂಬದಿ ಸವಾರ ಲಾಯ್ಡ್ ಗಾಯಗೊಂಡಿದ್ದಾರೆ.


ರಸ್ತೆಗೆ ಬಿದ್ದು ಇಬ್ಬರು ಯುವಕರು ನರಳುತ್ತಿದ್ದರೂ, ಅದರ ಬೆನ್ನಲ್ಲೇ ಇನ್ನೊಬ್ಬ ಸ್ವಿಫ್ಟ್ ಕಾರು ಅದೇ ದಾರಿಯಲ್ಲಿ ಬಂದಿದ್ದು ಅದರ ಚಾಲಕ ನೋಡಿಯೂ ಕರುಣೆ ತೋರದೆ ಸ್ಥಳದಿಂದ ತೆರಳಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರು ಬಂದಿದ್ದು ಗಾಯಗೊಂಡಿದ್ದ ಯುವಕರನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಲಿಸ್ಟರ್ ತೌರೊ ಸ್ಥಿತಿ ಗಂಭೀರವಾಗಿದ್ದು ಮುಖ, ತಲೆಗೆ ಏಟಾಗಿದೆ. ಕೈ ಮುರಿದಿದ್ದು ಶಸ್ತ್ರಚಿಕಿತ್ಸೆ ನಡೆಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸು ದಾಖಲಾಗಿದ್ದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡೆಕೊರೇಶನ್ ಕೆಲಸ ಮಾಡುತ್ತಿದ್ದ ಆಲಿಸ್ಟರ್ ತೌರೊ ಬಡ ಕುಟುಂಬದ ಯುವಕನಾಗಿದ್ದು ಆಸ್ಪತ್ರೆ ಖರ್ಚು ಭರಿಸಲು ದಾನಿಗಳ ಸಹಾಯ ಯಾಚಿಸಿದ್ದಾರೆ. ಈತನ ಸೋದರ ಆಸ್ಪತ್ರೆಯಲ್ಲಿದ್ದು ನೋಡಿಕೊಳ್ಳುತ್ತಿದ್ದಾರೆ. ಸಹೃದಯರು ಇವರ ಗೂಗಲ್ ಪೇ ಅಥವಾ ಬ್ಯಾಂಕ್ ಖಾತೆಗೆ ನೆರವು ನೀಡುವಂತೆ ಕೇಳಿಕೊಂಡಿದ್ದಾರೆ. Google Pay: Astel Touro - 7795924633
Mangalore Yeyyadi accident, 24 year old youth Astel Touro admitted in hospital in serious condition. Video of the accident has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm