ಬ್ರೇಕಿಂಗ್ ನ್ಯೂಸ್
25-11-23 09:56 pm Mangalore Correspondent ಕ್ರೈಂ
ಮಂಗಳೂರು, ನ.25: ಸ್ಕಾರ್ಪಿಯೋ ಕಾರು ಚಾಲಕನೊಬ್ಬ ಮಧ್ಯರಾತ್ರಿ ಬೈಕಿಗೆ ಡಿಕ್ಕಿಯಾಗಿ ಸವಾರ ನೆಲಕ್ಕುರುಳಿದರೂ ಸ್ಥಳದಿಂದ ಪರಾರಿಯಾದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಗೆ ಬಿದ್ದ ಬೈಕ್ ಸವಾರನನ್ನು ಇತರೇ ಕಾರು ಚಾಲಕರು ಕಂಡರೂ ಕಾಣದೆ ನಿರ್ಲಕ್ಷ್ಯ ತೋರಿದ್ದಾರೆ.
ನ.21ರಂದು ನಡುರಾತ್ರಿ 12.15ರ ಸುಮಾರಿಗೆ ಘಟನೆ ನಡೆದಿದ್ದು ಸವಾರ ಬೊಂದೇಲ್ ನಿವಾಸಿ ಆಲಿಸ್ಟರ್ ತೌರೊ (24) ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫಂಕ್ಷನ್ ಮುಗಿಸಿ ನಡುರಾತ್ರಿಯಲ್ಲಿ ಬೈಕಿನಲ್ಲಿ ಮನೆಯತ್ತ ಹೊರಟಿದ್ದರೆ, ಯೆಯ್ಯಾಡಿ ಬಳಿ ಸ್ಕಾರ್ಪಿಯೊ ಚಾಲಕ ನೇರವಾಗಿ ತಿರುವು ಪಡೆದಿದ್ದ. ಇದನ್ನು ಗಮನಿಸದೆ ಬೈಕ್ ನೇರವಾಗಿ ಡಿಕ್ಕಿಯಾಗಿದ್ದು ರಸ್ತೆಗೆ ಎಸೆಯಲ್ಪಟ್ಟ ಸವಾರ ಆಲಿಸ್ಟರ್ ತೌರೊ ಮತ್ತು ಹಿಂಬದಿ ಸವಾರ ಲಾಯ್ಡ್ ಗಾಯಗೊಂಡಿದ್ದಾರೆ.


ರಸ್ತೆಗೆ ಬಿದ್ದು ಇಬ್ಬರು ಯುವಕರು ನರಳುತ್ತಿದ್ದರೂ, ಅದರ ಬೆನ್ನಲ್ಲೇ ಇನ್ನೊಬ್ಬ ಸ್ವಿಫ್ಟ್ ಕಾರು ಅದೇ ದಾರಿಯಲ್ಲಿ ಬಂದಿದ್ದು ಅದರ ಚಾಲಕ ನೋಡಿಯೂ ಕರುಣೆ ತೋರದೆ ಸ್ಥಳದಿಂದ ತೆರಳಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರು ಬಂದಿದ್ದು ಗಾಯಗೊಂಡಿದ್ದ ಯುವಕರನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಲಿಸ್ಟರ್ ತೌರೊ ಸ್ಥಿತಿ ಗಂಭೀರವಾಗಿದ್ದು ಮುಖ, ತಲೆಗೆ ಏಟಾಗಿದೆ. ಕೈ ಮುರಿದಿದ್ದು ಶಸ್ತ್ರಚಿಕಿತ್ಸೆ ನಡೆಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸು ದಾಖಲಾಗಿದ್ದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡೆಕೊರೇಶನ್ ಕೆಲಸ ಮಾಡುತ್ತಿದ್ದ ಆಲಿಸ್ಟರ್ ತೌರೊ ಬಡ ಕುಟುಂಬದ ಯುವಕನಾಗಿದ್ದು ಆಸ್ಪತ್ರೆ ಖರ್ಚು ಭರಿಸಲು ದಾನಿಗಳ ಸಹಾಯ ಯಾಚಿಸಿದ್ದಾರೆ. ಈತನ ಸೋದರ ಆಸ್ಪತ್ರೆಯಲ್ಲಿದ್ದು ನೋಡಿಕೊಳ್ಳುತ್ತಿದ್ದಾರೆ. ಸಹೃದಯರು ಇವರ ಗೂಗಲ್ ಪೇ ಅಥವಾ ಬ್ಯಾಂಕ್ ಖಾತೆಗೆ ನೆರವು ನೀಡುವಂತೆ ಕೇಳಿಕೊಂಡಿದ್ದಾರೆ. Google Pay: Astel Touro - 7795924633
Mangalore Yeyyadi accident, 24 year old youth Astel Touro admitted in hospital in serious condition. Video of the accident has gone viral on social media.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm