ಬ್ರೇಕಿಂಗ್ ನ್ಯೂಸ್
25-11-23 09:56 pm Mangalore Correspondent ಕ್ರೈಂ
ಮಂಗಳೂರು, ನ.25: ಸ್ಕಾರ್ಪಿಯೋ ಕಾರು ಚಾಲಕನೊಬ್ಬ ಮಧ್ಯರಾತ್ರಿ ಬೈಕಿಗೆ ಡಿಕ್ಕಿಯಾಗಿ ಸವಾರ ನೆಲಕ್ಕುರುಳಿದರೂ ಸ್ಥಳದಿಂದ ಪರಾರಿಯಾದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಗೆ ಬಿದ್ದ ಬೈಕ್ ಸವಾರನನ್ನು ಇತರೇ ಕಾರು ಚಾಲಕರು ಕಂಡರೂ ಕಾಣದೆ ನಿರ್ಲಕ್ಷ್ಯ ತೋರಿದ್ದಾರೆ.
ನ.21ರಂದು ನಡುರಾತ್ರಿ 12.15ರ ಸುಮಾರಿಗೆ ಘಟನೆ ನಡೆದಿದ್ದು ಸವಾರ ಬೊಂದೇಲ್ ನಿವಾಸಿ ಆಲಿಸ್ಟರ್ ತೌರೊ (24) ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫಂಕ್ಷನ್ ಮುಗಿಸಿ ನಡುರಾತ್ರಿಯಲ್ಲಿ ಬೈಕಿನಲ್ಲಿ ಮನೆಯತ್ತ ಹೊರಟಿದ್ದರೆ, ಯೆಯ್ಯಾಡಿ ಬಳಿ ಸ್ಕಾರ್ಪಿಯೊ ಚಾಲಕ ನೇರವಾಗಿ ತಿರುವು ಪಡೆದಿದ್ದ. ಇದನ್ನು ಗಮನಿಸದೆ ಬೈಕ್ ನೇರವಾಗಿ ಡಿಕ್ಕಿಯಾಗಿದ್ದು ರಸ್ತೆಗೆ ಎಸೆಯಲ್ಪಟ್ಟ ಸವಾರ ಆಲಿಸ್ಟರ್ ತೌರೊ ಮತ್ತು ಹಿಂಬದಿ ಸವಾರ ಲಾಯ್ಡ್ ಗಾಯಗೊಂಡಿದ್ದಾರೆ.


ರಸ್ತೆಗೆ ಬಿದ್ದು ಇಬ್ಬರು ಯುವಕರು ನರಳುತ್ತಿದ್ದರೂ, ಅದರ ಬೆನ್ನಲ್ಲೇ ಇನ್ನೊಬ್ಬ ಸ್ವಿಫ್ಟ್ ಕಾರು ಅದೇ ದಾರಿಯಲ್ಲಿ ಬಂದಿದ್ದು ಅದರ ಚಾಲಕ ನೋಡಿಯೂ ಕರುಣೆ ತೋರದೆ ಸ್ಥಳದಿಂದ ತೆರಳಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರು ಬಂದಿದ್ದು ಗಾಯಗೊಂಡಿದ್ದ ಯುವಕರನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಲಿಸ್ಟರ್ ತೌರೊ ಸ್ಥಿತಿ ಗಂಭೀರವಾಗಿದ್ದು ಮುಖ, ತಲೆಗೆ ಏಟಾಗಿದೆ. ಕೈ ಮುರಿದಿದ್ದು ಶಸ್ತ್ರಚಿಕಿತ್ಸೆ ನಡೆಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸು ದಾಖಲಾಗಿದ್ದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಡೆಕೊರೇಶನ್ ಕೆಲಸ ಮಾಡುತ್ತಿದ್ದ ಆಲಿಸ್ಟರ್ ತೌರೊ ಬಡ ಕುಟುಂಬದ ಯುವಕನಾಗಿದ್ದು ಆಸ್ಪತ್ರೆ ಖರ್ಚು ಭರಿಸಲು ದಾನಿಗಳ ಸಹಾಯ ಯಾಚಿಸಿದ್ದಾರೆ. ಈತನ ಸೋದರ ಆಸ್ಪತ್ರೆಯಲ್ಲಿದ್ದು ನೋಡಿಕೊಳ್ಳುತ್ತಿದ್ದಾರೆ. ಸಹೃದಯರು ಇವರ ಗೂಗಲ್ ಪೇ ಅಥವಾ ಬ್ಯಾಂಕ್ ಖಾತೆಗೆ ನೆರವು ನೀಡುವಂತೆ ಕೇಳಿಕೊಂಡಿದ್ದಾರೆ. Google Pay: Astel Touro - 7795924633
Mangalore Yeyyadi accident, 24 year old youth Astel Touro admitted in hospital in serious condition. Video of the accident has gone viral on social media.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm