ಬ್ರೇಕಿಂಗ್ ನ್ಯೂಸ್
26-11-23 04:37 pm Bengaluru Correspondent ಕ್ರೈಂ
ಬೆಂಗಳೂರು, ನ.26: ವಂಚನೆ ಪ್ರಕರಣವೊಂದಕ್ಕೆ ಬಂಧಿಸಿ ‘ಬಿಟಿವಿ’ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ, ಎಂ.ಡಿ. ಜಿ.ಎಂ. ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕುಮಾರ್ ರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಎಂಬವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು.
ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ 'ಈಗಲ್ ಸೈಟ್ ಮೀಡಿಯಾ ಕಂಪೆನಿ' ಎಂಬ ಸಂಸ್ಥೆಯನ್ನು ಆರಂಭಿಸಿದ್ದು, ಇಬ್ಬರೂ ಅದರ ನಿರ್ದೇಶಕರಾಗಿದ್ದರು. ಆದರೆ ಅಶ್ವಿನ್ ಅವರ ದಾಖಲಾತಿಗಳನ್ನು ಆರೋಪಿ ಕುಮಾರ್ ದುರ್ಬಳಕೆ ಮಾಡಿಕೊಂಡು ಬ್ಯಾಂಕ್ಗಳಲ್ಲಿ ಖಾತೆ ತೆರೆದು ಕೋಟಿ ರೂ. ಗೂ ಅಧಿಕ ಹೆಚ್ಚು ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಕುಮಾರ್, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ, ಇತ್ತೀಚೆಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ವಿಜಯನಗರ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ನಲ್ಲಿ ಜಿಎಂ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಬೆದರಿಕೆ ಸೇರಿದಂತೆ ಬೆದರಿಕೆ ತಂತ್ರಗಳನ್ನು ಅನುಸರಿಸಿ ತನಿಖೆಯನ್ನು ಹಳಿತಪ್ಪಿಸಲು ಮತ್ತು ಪ್ರಕರಣವನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಲಾಗಿತ್ತು.
ಈ ನಡುವೆ ನಕಲಿ ಬೋರ್ಡ್ ರೆಸ್ಯೂಲ್ಯೂಶನ್ ಸೃಷ್ಟಿಸಿ ಕೋಟ್ಯಂತರ ರೂಗಳ ವಂಚನೆ ಸಂಬಂಧಿಸಿದಂತೆ ಬಿಟಿವಿಯ ಜಿಎಂ ಕುಮಾರ್ ಸೇರಿ ೧೦ ಮಂದಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
BTV news owner GM Kumar has been arrested by Bangalore Police in the Crores fraud case in relation to embezzling money through the falsification of board resolution documents belonging to Eagle site Media Company. GM Kumar was evading capture after complainant Mahindra filed a complaint against him. Kumar was the subject of an arrest warrant issued by the court. The judge has imposed a 14-day judicial detention order.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm