ಬ್ರೇಕಿಂಗ್ ನ್ಯೂಸ್
26-11-23 06:47 pm Mangaluru Correspondent ಕ್ರೈಂ
ಉಳ್ಳಾಲ, ನ.26: ವನ್ ಗ್ರಾಮ್ ಗೋಲ್ಡ್ ಆಭರಣ ಧರಿಸಿ ನಿತಿನ್ ಶೆಟ್ಟಿ ಹೆಸರಲ್ಲಿ ನಗರದ ಹಲವು ಕಡೆಗಳಲ್ಲಿ ಅಮಾಯಕರಿಗೆ ವಂಚಿಸುತ್ತಿರುವ ಶೋಕಿಲಾಲ ಗೂಡ್ಸ್ ಮುನೀರ ಓಎಲ್ ಎಕ್ಸ್ ನಲ್ಲೂ ಮಹಿಳೆಯ ಹೆಸರಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೋರ್ವನ ಫೋಟೊ ಕ್ಯಾಮೆರಾ ಖರೀದಿಸಿ ಹಣ ಕೊಡದೆ ಪರಾರಿಯಾಗಿದ್ದು ಈ ಬಗ್ಗೆ ವಿದ್ಯಾರ್ಥಿ ಕದ್ರಿ ಠಾಣೆಗೆ ದೂರು ನೀಡಿದ್ದರೂ ಪೊಲೀಸರ ಅಸಡ್ಡೆಯಿಂದ ಮುನೀರ ಈಗಲೂ ವಂಚನೆ ಕೃತ್ಯ ಮುಂದುವರಿಸಿದ ವಿಚಾರ ತಿಳಿದುಬಂದಿದೆ.
ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸೃಜನ್ ಆಳ್ವ ಎಂಬವರು ಓಎಲ್ ಎಕ್ಸ್ ಆಪಲ್ಲಿ ತನ್ನ ಕೆನನ್ ಕ್ಯಾಮೆರಾ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿದ್ದರು.
+91 97392 09819, 088846 99575 ಸಂಖ್ಯೆಗಳಲ್ಲಿ ಮೊಬೈಲ್ ಕರೆ ಮಾಡಿದ ಮಹಿಳೆಯೋರ್ವಳು ತನಗೆ ಕ್ಯಾಮೆರಾ ಬೇಕೆಂದು ಹೇಳಿ ಸೃಜನ್ ಅವರನ್ನ ಅಕ್ಟೋಬರ್ 24 ರಂದು ಕಂಕನಾಡಿಗೆ ಬರುವಂತೆ ಹೇಳಿದ್ದಾಳೆ.
ಮಹಿಳೆಯ ಮಾತು ನಂಬಿ ಕಂಕನಾಡಿಗೆ ಬಂದ ಸೃಜನ್ ಗೆ ಬೈಕಲ್ಲಿ ಬಂದ ಆಭರಣಧಾರಿ ವ್ಯಕ್ತಿ ತಾನು ನಿತಿನ್ ಶೆಟ್ಟಿ ಎಂದು ಪರಿಚಯಿಸಿದ್ದು ಬೈಕ್ ಸಹಸವಾರೆ ಬುರ್ಖಾಧಾರಿ ಮಹಿಳೆ ಸೃಜನ್ ಕೈಯಿಂದ ಕ್ಯಾಮೆರಾ ಇಸ್ಕೊಂಡ ತಕ್ಷಣ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದ. ಸುಮಾರು 50,000 ರೂಪಾಯಿ ಮಾರುಕಟ್ಟೆ ಮೌಲ್ಯದ ಕ್ಯಾಮರದ ಹಣ ಸಿಗದೆ ಕಂಗಾಲಾದ ಸೃಜನ್ ತಕ್ಷಣ ಕದ್ರಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಸೃಜನ್ ದೂರಲ್ಲಿ ನೀಡಿದ ಮೊಬೈಲ್ ನಂಬರ್ ನೋಡಿದ ಕ್ಷಣದಲ್ಲೇ ಪೊಲೀಸರು ಇದು ಗೂಡ್ಸ್ ಮುನೀರನೆಂದು ಹೇಳಿ ಕೈ ತೊಳೆದರೇ ಹೊರತು ಕದೀಮನನ್ನ ಹಿಡಿಯುವ ಗೋಜಿಗೇ ಹೋಗಿಲ್ಲ.


ಪರಿಣಾಮ ಅದೇ ಖದೀಮ ಕಳೆದ ನವೆಂಬರ್ 13 ರಂದು ಕುತ್ತಾರಿನ "ಸುಧಿ ಕಲೆಕ್ಷನ್ಸ್" ಎಂಬ ಮೊಬೈಲ್ ಮಳಿಗೆಯಲ್ಲೂ ಮೊಬೈಲ್ ಖರೀದಿಸಿ ಗೂಗಲ್ ಪೇ ಮಾಡಲು ತನ್ನ ಮೊಬೈಲ್ ಸ್ವಿಚ್ ಆಫ್ ಎಂದು ಬೋಂಗು ಬಿಟ್ಟು ಅಂಗಡಿ ಮಾಲೀಕ ದೀಪಕ್ ಅವರಿಗೆ ವಂಚಿಸಿದ್ದ.ಈ ಬಗ್ಗೆ ಉಳ್ಳಾಲ ಠಾಣೆಯಲ್ಲೂ ಮುನೀರನ ವಿರುದ್ಧ ದೂರು ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳ 7 ರಂದು ಇದೇ ಮುನೀರ ತೊಕ್ಕೊಟ್ಟಿನ ಅಯ್ಯಂಗಾರ್ ಬೇಕರಿ ಮತ್ತು ದಿನಸಿ ಅಂಗಡಿಯೊಂದರಲ್ಲೂ ಸಿಹಿತಿಂಡಿ , ದಿನಸಿ ಸಾಮಾಗ್ರಿಗಳನ್ನ ಖರೀದಿಸಿ ಅಂಗಡಿ ಮಾಲೀಕರಿಗೆ ಸಾವಿರಾರು ರೂಪಾಯಿಗಳನ್ನ ವಂಚಿಸಿ ,ಯಾಮಾರಿಸಿದ್ದ. ಗೂಡ್ಸ್ ಮುನೀರ ದ್ವಿಚಕ್ರ ವಾಹನಗಳ ಶೋರೂಮಿಂದ ಟೆಕ್ಸ್ಟ್ ರೈಡ್ ಗೆಂದು ಕೊಂಡೊಯ್ದ ವಾಹನಗಳನ್ನೇ ಮಾರಾಟ ಮಾಡಿದ್ದಾನಂತೆ. ಈತನ ಐನಾತಿ ಕೃತ್ಯಗಳಿಗೆ ಪತ್ನಿಯೇ ಸಾಥ್ ನೀಡುತ್ತಿದ್ದು ಈ ಬಂಟಿ-ಬಬ್ಲಿ ಜೋಡಿಗಳಿಂದ ಜನರು ಮತ್ತೆ ಮೋಸ ಹೋಗದಂತೆ ಪೊಲೀಸರು ಕಾರ್ಯ ಪೃವೃತ್ತರಾಗಬೇಕಿದೆ.
Infamous fraudulent man Goods Muneer has finally been taken into custody by Mangalore's Ullal police. Following his apprehension, an additional case of photo camera theft was reported to the Kadri police department.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm