ಬ್ರೇಕಿಂಗ್ ನ್ಯೂಸ್
26-11-23 09:25 pm Mangaluru Correspondent ಕ್ರೈಂ
ಪುತ್ತೂರು, ನ.26: ಸವಣೂರು ಗ್ರಾಮದ ಎಡಪತ್ಯ ಫಾರ್ಮ್ ನಲ್ಲಿ 25 ಗೋಣಿಯಷ್ಟು ಒಣ ಅಡಿಕೆ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದೆ. ನ.25ರಂದು ಶನಿವಾರ ನಸುಕಿನಲ್ಲಿ ತಲವಾರು ತೋರಿಸಿ ಪರಾರಿಯಾಗಿದ್ದ ಅಡಿಕೆ ಕಳ್ಳರ ಕೃತ್ಯದ ಹಿನ್ನೆಲೆಯಲ್ಲಿ ಸೋಲಾರ್ ಅಂಗಳದಲ್ಲಿ ಇರಿಸಲಾಗಿದ್ದ ಅಡಿಕೆಯನ್ನು ಪರಿಶೀಲಿಸಿದಾಗ 5 ಲಕ್ಷದಷ್ಟು ಮೊತ್ತದ ಅಡಿಕೆ ಕಳವಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅಡಿಕೆ ಫಾರ್ಮ್ಸ್ ಮಾಲೀಕ, ಸವಣೂರು ಗ್ರಾಮದ ನಿವಾಸಿ ಚಂದ್ರ ಎಡಪತ್ಯ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ನ.25ರಂದು ನಸುಕಿನ ವೇಳೆಗೆ 3.30ರ ಸುಮಾರಿಗೆ ಚಂದ್ರ ಅವರ ಪುತ್ರ ನಿಷ್ಕಲ್ ರಾಮ, ಮೈಸೂರಿನಿಂದ ಬೈಕಿನಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ, ಮನೆಯ ಅಂಗಳಕ್ಕೆ ಸ್ಕೂಟರ್ ಮತ್ತು ಇನ್ನೊಂದು ಕಾರಿನಲ್ಲಿ ಬಂದಿದ್ದ ಅಡಿಕೆ ಕಳ್ಳರು ಸುಲಿದಿಟ್ಟ ಅಡಿಕೆ ಮತ್ತು ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡುತ್ತಿದ್ದರು.
ಅಡಿಕೆಯನ್ನು ತಮ್ಮ ವಾಹನಕ್ಕೆ ತುಂಬಿಸುತ್ತಿದ್ದಾಗ ನಿಷ್ಕಲ್ ರಾಮ ಪ್ರಶ್ನಿಸಿದ್ದು, ಈ ವೇಳೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿದ್ದಾರೆ. ನಿಷ್ಕಲ್ ಆರೋಪಿಗಳಲ್ಲಿ ಒಬ್ಬನನ್ನು ಹಿಡಿಯಲು ಯತ್ನಿಸಿದಾಗ ಹಲ್ಲೆ ನಡೆಸಿದ್ದಾರೆ. ಎರಡು ಗೋಣಿ ಚೀಲದಲ್ಲಿ ಸುಲಿದಿಟ್ಟ ಅಡಿಕೆಯನ್ನು ಸ್ಕೂಟರಿನಲ್ಲಿಟ್ಟು ಒಬ್ಬಾತ ಪರಾರಿಯಾಗಿದ್ದಾನೆ.
ಇನ್ನೊಬ್ಬ ವ್ಯಕ್ತಿ ಬಶೀರ್ ಎನ್ನುವಾತ ಸುಲಿಯದ ಅಡಿಕೆಯನ್ನು ಎಂಟು ಗೋಣಿ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಬೊಬ್ಬೆ ಕೇಳಿ ಮನೆಯವರು ಬಂದಿದ್ದು ಬಶೀರ್ ನನ್ನು ಹಿಡಿದು ಕೂಡಿ ಹಾಕಿದ್ದಾರೆ. ವಿಚಾರಣೆ ವೇಳೆ ಪರಾರಿಯಾದ ವ್ಯಕ್ತಿಯನ್ನು ಹಕೀಂ ಎಂದು ಬಶೀರ್ ತಿಳಿಸಿದ್ದಾನೆ. ಸದ್ರಿ ಆರೋಪಿಯನ್ನು ಹಿಡಿದು ಮನೆಯವರೇ ಬೆಳ್ಳಾರೆ ಠಾಣೆಗೆ ಕರೆತಂದಿದ್ದು, ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಆರೋಪಿ ಬಶೀರ್ ಇದೇ ರೀತಿ ಹಲವು ಸಮಯದಿಂದ ಅಡಿಕೆ ಕಳ್ಳತನ ಮಾಡುತ್ತಿರುವುದಾಗಿ ಹೇಳಿದ್ದಾನೆ.
Two arecanut thieves, who arrived in a vehicle to Edapathya farm of Savanoor, swung a sword at the son of the owner as he caught them red handed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm