ಬ್ರೇಕಿಂಗ್ ನ್ಯೂಸ್
26-11-23 09:25 pm Mangaluru Correspondent ಕ್ರೈಂ
ಪುತ್ತೂರು, ನ.26: ಸವಣೂರು ಗ್ರಾಮದ ಎಡಪತ್ಯ ಫಾರ್ಮ್ ನಲ್ಲಿ 25 ಗೋಣಿಯಷ್ಟು ಒಣ ಅಡಿಕೆ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದೆ. ನ.25ರಂದು ಶನಿವಾರ ನಸುಕಿನಲ್ಲಿ ತಲವಾರು ತೋರಿಸಿ ಪರಾರಿಯಾಗಿದ್ದ ಅಡಿಕೆ ಕಳ್ಳರ ಕೃತ್ಯದ ಹಿನ್ನೆಲೆಯಲ್ಲಿ ಸೋಲಾರ್ ಅಂಗಳದಲ್ಲಿ ಇರಿಸಲಾಗಿದ್ದ ಅಡಿಕೆಯನ್ನು ಪರಿಶೀಲಿಸಿದಾಗ 5 ಲಕ್ಷದಷ್ಟು ಮೊತ್ತದ ಅಡಿಕೆ ಕಳವಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅಡಿಕೆ ಫಾರ್ಮ್ಸ್ ಮಾಲೀಕ, ಸವಣೂರು ಗ್ರಾಮದ ನಿವಾಸಿ ಚಂದ್ರ ಎಡಪತ್ಯ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ನ.25ರಂದು ನಸುಕಿನ ವೇಳೆಗೆ 3.30ರ ಸುಮಾರಿಗೆ ಚಂದ್ರ ಅವರ ಪುತ್ರ ನಿಷ್ಕಲ್ ರಾಮ, ಮೈಸೂರಿನಿಂದ ಬೈಕಿನಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ, ಮನೆಯ ಅಂಗಳಕ್ಕೆ ಸ್ಕೂಟರ್ ಮತ್ತು ಇನ್ನೊಂದು ಕಾರಿನಲ್ಲಿ ಬಂದಿದ್ದ ಅಡಿಕೆ ಕಳ್ಳರು ಸುಲಿದಿಟ್ಟ ಅಡಿಕೆ ಮತ್ತು ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡುತ್ತಿದ್ದರು.
ಅಡಿಕೆಯನ್ನು ತಮ್ಮ ವಾಹನಕ್ಕೆ ತುಂಬಿಸುತ್ತಿದ್ದಾಗ ನಿಷ್ಕಲ್ ರಾಮ ಪ್ರಶ್ನಿಸಿದ್ದು, ಈ ವೇಳೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿದ್ದಾರೆ. ನಿಷ್ಕಲ್ ಆರೋಪಿಗಳಲ್ಲಿ ಒಬ್ಬನನ್ನು ಹಿಡಿಯಲು ಯತ್ನಿಸಿದಾಗ ಹಲ್ಲೆ ನಡೆಸಿದ್ದಾರೆ. ಎರಡು ಗೋಣಿ ಚೀಲದಲ್ಲಿ ಸುಲಿದಿಟ್ಟ ಅಡಿಕೆಯನ್ನು ಸ್ಕೂಟರಿನಲ್ಲಿಟ್ಟು ಒಬ್ಬಾತ ಪರಾರಿಯಾಗಿದ್ದಾನೆ.
ಇನ್ನೊಬ್ಬ ವ್ಯಕ್ತಿ ಬಶೀರ್ ಎನ್ನುವಾತ ಸುಲಿಯದ ಅಡಿಕೆಯನ್ನು ಎಂಟು ಗೋಣಿ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಬೊಬ್ಬೆ ಕೇಳಿ ಮನೆಯವರು ಬಂದಿದ್ದು ಬಶೀರ್ ನನ್ನು ಹಿಡಿದು ಕೂಡಿ ಹಾಕಿದ್ದಾರೆ. ವಿಚಾರಣೆ ವೇಳೆ ಪರಾರಿಯಾದ ವ್ಯಕ್ತಿಯನ್ನು ಹಕೀಂ ಎಂದು ಬಶೀರ್ ತಿಳಿಸಿದ್ದಾನೆ. ಸದ್ರಿ ಆರೋಪಿಯನ್ನು ಹಿಡಿದು ಮನೆಯವರೇ ಬೆಳ್ಳಾರೆ ಠಾಣೆಗೆ ಕರೆತಂದಿದ್ದು, ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಆರೋಪಿ ಬಶೀರ್ ಇದೇ ರೀತಿ ಹಲವು ಸಮಯದಿಂದ ಅಡಿಕೆ ಕಳ್ಳತನ ಮಾಡುತ್ತಿರುವುದಾಗಿ ಹೇಳಿದ್ದಾನೆ.
Two arecanut thieves, who arrived in a vehicle to Edapathya farm of Savanoor, swung a sword at the son of the owner as he caught them red handed.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am