ಬ್ರೇಕಿಂಗ್ ನ್ಯೂಸ್
26-11-23 09:25 pm Mangaluru Correspondent ಕ್ರೈಂ
ಪುತ್ತೂರು, ನ.26: ಸವಣೂರು ಗ್ರಾಮದ ಎಡಪತ್ಯ ಫಾರ್ಮ್ ನಲ್ಲಿ 25 ಗೋಣಿಯಷ್ಟು ಒಣ ಅಡಿಕೆ ಕಳ್ಳತನ ಆಗಿರುವ ಶಂಕೆ ವ್ಯಕ್ತವಾಗಿದೆ. ನ.25ರಂದು ಶನಿವಾರ ನಸುಕಿನಲ್ಲಿ ತಲವಾರು ತೋರಿಸಿ ಪರಾರಿಯಾಗಿದ್ದ ಅಡಿಕೆ ಕಳ್ಳರ ಕೃತ್ಯದ ಹಿನ್ನೆಲೆಯಲ್ಲಿ ಸೋಲಾರ್ ಅಂಗಳದಲ್ಲಿ ಇರಿಸಲಾಗಿದ್ದ ಅಡಿಕೆಯನ್ನು ಪರಿಶೀಲಿಸಿದಾಗ 5 ಲಕ್ಷದಷ್ಟು ಮೊತ್ತದ ಅಡಿಕೆ ಕಳವಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಅಡಿಕೆ ಫಾರ್ಮ್ಸ್ ಮಾಲೀಕ, ಸವಣೂರು ಗ್ರಾಮದ ನಿವಾಸಿ ಚಂದ್ರ ಎಡಪತ್ಯ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ನ.25ರಂದು ನಸುಕಿನ ವೇಳೆಗೆ 3.30ರ ಸುಮಾರಿಗೆ ಚಂದ್ರ ಅವರ ಪುತ್ರ ನಿಷ್ಕಲ್ ರಾಮ, ಮೈಸೂರಿನಿಂದ ಬೈಕಿನಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ, ಮನೆಯ ಅಂಗಳಕ್ಕೆ ಸ್ಕೂಟರ್ ಮತ್ತು ಇನ್ನೊಂದು ಕಾರಿನಲ್ಲಿ ಬಂದಿದ್ದ ಅಡಿಕೆ ಕಳ್ಳರು ಸುಲಿದಿಟ್ಟ ಅಡಿಕೆ ಮತ್ತು ಒಣಗಲು ಹಾಕಿದ್ದ ಅಡಿಕೆಯನ್ನು ಕಳವು ಮಾಡುತ್ತಿದ್ದರು.
ಅಡಿಕೆಯನ್ನು ತಮ್ಮ ವಾಹನಕ್ಕೆ ತುಂಬಿಸುತ್ತಿದ್ದಾಗ ನಿಷ್ಕಲ್ ರಾಮ ಪ್ರಶ್ನಿಸಿದ್ದು, ಈ ವೇಳೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿದ್ದಾರೆ. ನಿಷ್ಕಲ್ ಆರೋಪಿಗಳಲ್ಲಿ ಒಬ್ಬನನ್ನು ಹಿಡಿಯಲು ಯತ್ನಿಸಿದಾಗ ಹಲ್ಲೆ ನಡೆಸಿದ್ದಾರೆ. ಎರಡು ಗೋಣಿ ಚೀಲದಲ್ಲಿ ಸುಲಿದಿಟ್ಟ ಅಡಿಕೆಯನ್ನು ಸ್ಕೂಟರಿನಲ್ಲಿಟ್ಟು ಒಬ್ಬಾತ ಪರಾರಿಯಾಗಿದ್ದಾನೆ.
ಇನ್ನೊಬ್ಬ ವ್ಯಕ್ತಿ ಬಶೀರ್ ಎನ್ನುವಾತ ಸುಲಿಯದ ಅಡಿಕೆಯನ್ನು ಎಂಟು ಗೋಣಿ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಬೊಬ್ಬೆ ಕೇಳಿ ಮನೆಯವರು ಬಂದಿದ್ದು ಬಶೀರ್ ನನ್ನು ಹಿಡಿದು ಕೂಡಿ ಹಾಕಿದ್ದಾರೆ. ವಿಚಾರಣೆ ವೇಳೆ ಪರಾರಿಯಾದ ವ್ಯಕ್ತಿಯನ್ನು ಹಕೀಂ ಎಂದು ಬಶೀರ್ ತಿಳಿಸಿದ್ದಾನೆ. ಸದ್ರಿ ಆರೋಪಿಯನ್ನು ಹಿಡಿದು ಮನೆಯವರೇ ಬೆಳ್ಳಾರೆ ಠಾಣೆಗೆ ಕರೆತಂದಿದ್ದು, ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಆರೋಪಿ ಬಶೀರ್ ಇದೇ ರೀತಿ ಹಲವು ಸಮಯದಿಂದ ಅಡಿಕೆ ಕಳ್ಳತನ ಮಾಡುತ್ತಿರುವುದಾಗಿ ಹೇಳಿದ್ದಾನೆ.
Two arecanut thieves, who arrived in a vehicle to Edapathya farm of Savanoor, swung a sword at the son of the owner as he caught them red handed.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm