ಬ್ರೇಕಿಂಗ್ ನ್ಯೂಸ್
06-08-20 01:44 pm Headline Karnataka News Network ಕ್ರೈಂ
ಸುಶಾಂತ್ ಸಿಂಗ್ ರಜಪೂತ್ ಸೇರಿದಂತೆ ವಿವಿಧ ನಟರಿಗೆ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಉಡುಪಿ ಮೂಲದ ದಿಶಾ ಸಾಲಿಯಾನ್ ಪ್ರಕರಣ ಕೂಡ ತಿರುವು ಪಡೆದುಕೊಳ್ಳುವ ಸೂಚನೆ ನೀಡಿದೆ. ಜೂನ್ 9ರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ವರದಿಯಾಗಿತ್ತು. 14ನೇ ಮಹಡಿಯಲ್ಲಿ ವಾಸವಾಗಿದ್ದ ದಿಶಾ, ಅಲ್ಲಿಂದ ಬಿದ್ದು ಜೀವ ಕಳೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರ ಭಾವಿ ಪತಿ ರೋಹನ್ ರಾಯ್ ಮನೆಯಲ್ಲಿದ್ದರು ಎನ್ನಲಾಗಿದೆ.
ತಡವಾಗಿ ಮರಣೋತ್ತರ ಪರೀಕ್ಷೆ
25 ವರ್ಷದ ದಿಶಾ ಸಾವು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಅವರು ಜೂನ್ 9ರಂದು ಮೃತಪಟ್ಟಿದ್ದರೂ ಎರಡು ದಿನಗಳ ನಂತರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಎರಡು ದಿನ ವಿಳಂಬ ಮಾಡಿ ಪರೀಕ್ಷೆ ನಡೆಸಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಮುಂಬೈನ ಬೊರಿವಲಿ ಪೋಸ್ಟ್ ಮಾರ್ಟಂ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.
ಸಾವಿಗೆ ಪ್ರಾಥಮಿಕ ಕಾರಣ
ಈ ಪರೀಕ್ಷೆಯ ಕೆಲವು ಅಂಶಗಳು ಬಹಿರಂಗವಾಗಿವೆ. ದಿಶಾ ತಲೆಗೆ ಗಂಭೀರವಾದ ಗಾಯಗಳಾಗಿದ್ದವು. ಜತೆಗೆ ದೇಹದಲ್ಲಿ ಅನೇಕ ಅಸ್ವಾಭಾವಿಕ ಗಾಯಗಳಿದ್ದವು. ಕಟ್ಟಡದ 14ನೇ ಮಹಡಿಯಿಂದ ಬಿದ್ದ ಪರಿಣಾಮವಾಗಿ ಉಂಟಾದ ಗಾಯಗಳು ಆಕೆಯ ಸಾವಿಗೆ ಪ್ರಾಥಮಿಕ ಕಾರಣಗಳಾಗಿವೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ವರದಿಯಲ್ಲಿ ತಿಳಿಸಿದ್ದಾರೆ.

ದಿಶಾ ಮೇಲೆ ದೌರ್ಜನ್ಯ?
ದಿಶಾ ಸಾಯುವ ಮುನ್ನ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂಬ ಆರೋಪ ಕೇಳಿಬಂದಿದೆ. ದಿಶಾ ಮರಣೋತ್ತರ ಪರೀಕ್ಷೆಯಲ್ಲಿ ಅವರ ಖಾಸಗಿ ಅಂಗಗಳಲ್ಲಿಯೂ ಗಾಯಗಳಾಗಿರುವುದು ಗೊತ್ತಾಗಿದೆ ಎಂದು ಬಿಜೆಪಿ ಸಂಸದ ನಾರಾಯಣ ರಾಣೆ ಆರೋಪಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ. ಮಹಿಳೆಯರ ಅಸ್ವಾಭಾವಿಕ ಸಾವಿನ ಪ್ರಕರಣದಲ್ಲಿ ಅವರ ಗುಪ್ತಾಂಗದ ದ್ರವ್ಯಗಳನ್ನು ಶೇಖರಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ದಿಶಾ ಪ್ರಕರಣದಲ್ಲಿಯೂ ಇದನ್ನು ಸಂಗ್ರಹಿಸಿದ್ದು, ರಾಸಾಯನಿಕ ವಿಶ್ಲೇಷಣೆಗೆ ರವಾನಿಸಲಾಗಿದೆ.

ಸುಶಾಂತ್ ಸಾವಿಗೆ ನಂಟು?
ದಿಶಾ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಸಂಸದ ರಾಣೆ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಯೂ ಈ ರೀತಿಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಪ್ರಕರಣಕ್ಕೂ ಸುಶಾಂತ್ ಸಾವಿಗೂ ಸಂಬಂಧವಿದೆ ಎಂದೂ ಹೇಳಲಾಗಿದೆ.
ದಿಶಾ ಸಾವಿನ ರಹಸ್ಯ ಸುಶಾಂತ್ಗೆ ತಿಳಿದಿತ್ತೇ?
ದಿಶಾ ಸಾವನ್ನಪ್ಪಿದ ಐದು ದಿನದಲ್ಲಿ ಸುಶಾಂತ್ ಸಾವಿಗೀಡಾಗಿದ್ದಾರೆ. ತಮ್ಮ ಮಾಜಿ ಮ್ಯಾನೇಜರ್ ದಿಶಾ ಸಾವಿನ ಹಿಂದಿನ ರಹಸ್ಯ ಸುಶಾಂತ್ಗೆ ಗೊತ್ತಾಗಿತ್ತು. ಅವರು ಅದರಿಂದ ತುಂಬಾ ಬೇಸರಪಟ್ಟುಕೊಂಡಿದ್ದರು. ಇದರ ಕುರಿತು ಅವರು ಬಹಿರಂಗಪಡಿಸಲು ಮುಂದಾಗಿದ್ದರು. ಈ ಕಾರಣದಿಂದಲೇ ಸುಶಾಂತ್ರನ್ನು ಹತ್ಯೆ ಮಾಡಿ ಅದನ್ನೂ ಅತ್ಮಹತ್ಯೆ ಎಂದು ಬಿಂಬಿಸಲಾಗಿದೆ. ಈ ಎರಡರಲ್ಲಿಯೂ ಸುಶಾಂತ್ ಗೆಳೆಯ ಎಂದು ಹೇಳಿಕೊಂಡಿರುವ ಸಂದೀಪ್ ಸಿಂಗ್ ಕೈವಾಡವಿದೆ ಎಂಬ ವಾದ ಮುಂದಿಡಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm