ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am