ಬ್ರೇಕಿಂಗ್ ನ್ಯೂಸ್
30-11-23 03:15 pm Bangalore Correspondent ಕ್ರೈಂ
ಬೆಂಗಳೂರು, ನ.30 : ತನ್ನ ಪ್ರಿಯಕರನ ಮೊಬೈಲ್ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋಗಳನ್ನು ಕಂಡ ಪ್ರೇಯಸಿಯೊಬ್ಬಳು ಶಾಕ್ ಆಗಿದ್ದಾಳೆ. ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಬಿಪಿಓ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಯುವತಿ, ತನ್ನ ಸಹೋದ್ಯೋಗಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಆಗಾಗ್ಗೆ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಅದನ್ನು ಪ್ರಿಯಕರ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡಿದ್ದ. ಅದನ್ನು ಗಮನಿಸಿದ್ದ ಯುವತಿ, ಹುಡುಗ ಶೌಚಾಲಯಕ್ಕೆ ಹೋದಾಗ ಆತನ ಮೊಬೈಲ್ ತೆಗೆದು ತನ್ನ ಫೋಟೊ ಡಿಲೀಟ್ ಮಾಡಲು ಮುಂದಾಗಿದ್ದಳು. ಆಗ ಆತನ ಮೊಬೈಲ್ ನಲ್ಲಿ ಬರೋಬರಿ 13 ಸಾವಿರ ಯುವತಿಯರ ನಗ್ನ ಫೋಟೋಗಳು, ವಿಡಿಯೋಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾಳೆ.
ವಿಪರ್ಯಾಸವೆಂದರೆ ಈ ಪೈಕಿ ತನ್ನದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಹಲವು ಯುವತಿಯರ ಮಾದಕ ಚಿತ್ರಗಳಿದ್ದವು. ಇದನ್ನೆಲ್ಲ ಕಂಡು ಶಾಕ್ ಆದ ಯುವತಿ, ಪ್ರಿಯಕರನ ಜತೆ ಜಗಳ ನಡೆಸಿ ಆತನಿಂದ ದೂರವಾಗಿದ್ದಾಳೆ. ಬಳಿಕ ತನ್ನ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.
ಅಧಿಕಾರಿ ವರ್ಗ, ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆತ ಮಾತ್ರ ತಾನು ಯಾವ ಯುವತಿಗೂ ತೊಂದರೆ ಕೊಟ್ಟಿಲ್ಲ ಎಂದಿದ್ದಾನೆ. ಇಷ್ಟೊಂದು ಯುವತಿಯರ ಅರೆನಗ್ನ ಫೋಟೋಗಳನ್ನು ಹೇಗೆ ಸಂಗ್ರಹಿಸಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಯುವತಿಯರ ಫೋಟೊ ತೆಗೆದು ಮಾರ್ಫ್ ಮಾಡಿರುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಂಪನಿ ಅಧಿಕಾರಿಗಳೇ ನ.23ರಂದು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಳಿಕ ಮಂಗಳೂರು ಮೂಲದ ಆದಿತ್ಯ ಸಂತೋಷ್ ಎಂಬ ಟೆಕ್ಕಿಯನ್ನು ಬಂಧಿಸಿದ್ದಾರೆ. ಹುಡುಗಿಯರ ಫೋಟೊ ಮಾರ್ಫ್ ಮಾಡಿಕೊಂಡು ಈ ರೀತಿ ಸಂಗ್ರಹಿಸಿಟ್ಟಿದ್ದಾಗಿ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Mangalore based BPO staffer arrested for storing 13000 naked photos and videos of women in Bangalore. The accused BPO staffer, identified as Aditya Santhosh, was arrested by the Bengaluru Cyber Crime police.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am