ಬ್ರೇಕಿಂಗ್ ನ್ಯೂಸ್
30-11-23 03:15 pm Bangalore Correspondent ಕ್ರೈಂ
ಬೆಂಗಳೂರು, ನ.30 : ತನ್ನ ಪ್ರಿಯಕರನ ಮೊಬೈಲ್ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋಗಳನ್ನು ಕಂಡ ಪ್ರೇಯಸಿಯೊಬ್ಬಳು ಶಾಕ್ ಆಗಿದ್ದಾಳೆ. ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಬಿಪಿಓ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಯುವತಿ, ತನ್ನ ಸಹೋದ್ಯೋಗಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಆಗಾಗ್ಗೆ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಅದನ್ನು ಪ್ರಿಯಕರ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡಿದ್ದ. ಅದನ್ನು ಗಮನಿಸಿದ್ದ ಯುವತಿ, ಹುಡುಗ ಶೌಚಾಲಯಕ್ಕೆ ಹೋದಾಗ ಆತನ ಮೊಬೈಲ್ ತೆಗೆದು ತನ್ನ ಫೋಟೊ ಡಿಲೀಟ್ ಮಾಡಲು ಮುಂದಾಗಿದ್ದಳು. ಆಗ ಆತನ ಮೊಬೈಲ್ ನಲ್ಲಿ ಬರೋಬರಿ 13 ಸಾವಿರ ಯುವತಿಯರ ನಗ್ನ ಫೋಟೋಗಳು, ವಿಡಿಯೋಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾಳೆ.
ವಿಪರ್ಯಾಸವೆಂದರೆ ಈ ಪೈಕಿ ತನ್ನದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಹಲವು ಯುವತಿಯರ ಮಾದಕ ಚಿತ್ರಗಳಿದ್ದವು. ಇದನ್ನೆಲ್ಲ ಕಂಡು ಶಾಕ್ ಆದ ಯುವತಿ, ಪ್ರಿಯಕರನ ಜತೆ ಜಗಳ ನಡೆಸಿ ಆತನಿಂದ ದೂರವಾಗಿದ್ದಾಳೆ. ಬಳಿಕ ತನ್ನ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.
ಅಧಿಕಾರಿ ವರ್ಗ, ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆತ ಮಾತ್ರ ತಾನು ಯಾವ ಯುವತಿಗೂ ತೊಂದರೆ ಕೊಟ್ಟಿಲ್ಲ ಎಂದಿದ್ದಾನೆ. ಇಷ್ಟೊಂದು ಯುವತಿಯರ ಅರೆನಗ್ನ ಫೋಟೋಗಳನ್ನು ಹೇಗೆ ಸಂಗ್ರಹಿಸಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ಯುವತಿಯರ ಫೋಟೊ ತೆಗೆದು ಮಾರ್ಫ್ ಮಾಡಿರುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಂಪನಿ ಅಧಿಕಾರಿಗಳೇ ನ.23ರಂದು ಕೇಂದ್ರ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಳಿಕ ಮಂಗಳೂರು ಮೂಲದ ಆದಿತ್ಯ ಸಂತೋಷ್ ಎಂಬ ಟೆಕ್ಕಿಯನ್ನು ಬಂಧಿಸಿದ್ದಾರೆ. ಹುಡುಗಿಯರ ಫೋಟೊ ಮಾರ್ಫ್ ಮಾಡಿಕೊಂಡು ಈ ರೀತಿ ಸಂಗ್ರಹಿಸಿಟ್ಟಿದ್ದಾಗಿ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Mangalore based BPO staffer arrested for storing 13000 naked photos and videos of women in Bangalore. The accused BPO staffer, identified as Aditya Santhosh, was arrested by the Bengaluru Cyber Crime police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm