ಬ್ರೇಕಿಂಗ್ ನ್ಯೂಸ್
30-11-23 07:35 pm Bangalore Correspondent ಕ್ರೈಂ
ಬೆಂಗಳೂರು, ನ 30: ನವಜಾತ ಶಿಶು ಮಾರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧಿತರಾದ 10 ಮಂದಿ ಆರೋಪಿಗಳ ವಿಚಾರಣೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಶುಕ್ರವಾರ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಸ್ವಾಮಿ ಕಣ್ಣನ್, ಹೇಮಲತಾ, ಶರಣ್ಯ ಹಾಗೂ ಮುರುಗೇಶ್ವರಿ ಎಂಬುವರು 20 ದಿನದ ಗಂಡು ಶಿಶುವನ್ನು ಮಾರಾಟಕ್ಕೆ ಮುಂದಾಗಿದ್ದಾಗ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಬಳಿಕ ಮಹಾಲಕ್ಷ್ಮೀ, ರಾಧಾ, ಕೇವಿನ್ ಸೇರಿ ಐವರನ್ನು ವಿಚಾರಣೆ ಮಾಡಿದ್ದರು.
ಬಂಧಿತರ ವಿಚಾರಣೆಯಿಂದ ದಿನೆ ದಿನೆ ಹೊಸ ವಿಚಾರಗಳು ಬೆಳಕಿಗೆ ಬರ್ತಿವೆ. ಹಲವು ವರ್ಷಗಳಿಂದ ಪುಟ್ಟ ಕಂದಮ್ಮಗಳನ್ನು ಕರ್ನಾಟಕ ಸೇರಿ ಬೇರೆ ರಾಜ್ಯಗಳಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಈ ವೇಳೆ 6 ವರ್ಷಗಳಲ್ಲಿ ಬರೋಬ್ಬರಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ ಮಾಡಿರೋದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು, ಉಳಿದ ಕಂದಮ್ಮಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದಾಗಿ ಹೇಳಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಸಿಸಿಬಿಗೆ ಕೇವಲ ಹತ್ತು ಮಕ್ಕಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅನ್ನೋದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮೇನ್ ಕಿಂಗ್ ಪಿನ್, ಕಮ್ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀಯ ಕಥೆಯೇ ಒಂದು ರೋಚಕ. ಏನೂ ಇಲ್ಲದೆ ದುಡಿಮೆಗೆಂದು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ 2015 ರಿಂದ 2017ರ ವರೆಗೆ ಕೇವಲ 8 ಸಾವಿರ ರೂ. ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಈಕೆಗೆ ಪರಿಚಯ ಆದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡೋದಾಗಿ ಹೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ಮಹಿಳೆ ನೀಡಿದ್ದಳು. ಹಣದ ರುಚಿ ನೋಡಿದ ಮಹಾಲಕ್ಷ್ಮಿ ನಂತರ ದಿನಗಳಲ್ಲಿ ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡುತ್ತಿದ್ದಳು. ಇನ್ನು 2017 ರಿಂದಲೂ ಈ ದಂಧೆಯನ್ನ ಶುರುಮಾಡಿದ್ದ ಮಹಾಲಕ್ಷ್ಮೀ ಹಿಂದೆ ತಿರುಗಿ ನೋಡಿರಲಿಲ್ಲ. ಇದೀಗ ಪ್ರಕಣದ ಬಗ್ಗೆ ಸಿಸಿಬಿ ಫುಲ್ ಗ್ರಿಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಸೇರಿದಂತೆ ಆರೋಪಿಗಳ ವಿಚಾರಣೆ ಮುಂದುವರೆದಿದೆ.
In a recent crackdown, the Central Crime Branch (CCB) officials apprehended three more individuals in connection with a case involving the sale of newborn babies. This revelation has raised suspicions about reputed hospitals and doctors in Tamil Nadu and Karnataka being part of this illicit network.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm