ಬ್ರೇಕಿಂಗ್ ನ್ಯೂಸ್
30-11-23 07:35 pm Bangalore Correspondent ಕ್ರೈಂ
ಬೆಂಗಳೂರು, ನ 30: ನವಜಾತ ಶಿಶು ಮಾರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧಿತರಾದ 10 ಮಂದಿ ಆರೋಪಿಗಳ ವಿಚಾರಣೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಶುಕ್ರವಾರ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಸ್ವಾಮಿ ಕಣ್ಣನ್, ಹೇಮಲತಾ, ಶರಣ್ಯ ಹಾಗೂ ಮುರುಗೇಶ್ವರಿ ಎಂಬುವರು 20 ದಿನದ ಗಂಡು ಶಿಶುವನ್ನು ಮಾರಾಟಕ್ಕೆ ಮುಂದಾಗಿದ್ದಾಗ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಬಳಿಕ ಮಹಾಲಕ್ಷ್ಮೀ, ರಾಧಾ, ಕೇವಿನ್ ಸೇರಿ ಐವರನ್ನು ವಿಚಾರಣೆ ಮಾಡಿದ್ದರು.
ಬಂಧಿತರ ವಿಚಾರಣೆಯಿಂದ ದಿನೆ ದಿನೆ ಹೊಸ ವಿಚಾರಗಳು ಬೆಳಕಿಗೆ ಬರ್ತಿವೆ. ಹಲವು ವರ್ಷಗಳಿಂದ ಪುಟ್ಟ ಕಂದಮ್ಮಗಳನ್ನು ಕರ್ನಾಟಕ ಸೇರಿ ಬೇರೆ ರಾಜ್ಯಗಳಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಸದ್ಯ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಈ ವೇಳೆ 6 ವರ್ಷಗಳಲ್ಲಿ ಬರೋಬ್ಬರಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ ಮಾಡಿರೋದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು, ಉಳಿದ ಕಂದಮ್ಮಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದಾಗಿ ಹೇಳಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಸಿಸಿಬಿಗೆ ಕೇವಲ ಹತ್ತು ಮಕ್ಕಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅನ್ನೋದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮೇನ್ ಕಿಂಗ್ ಪಿನ್, ಕಮ್ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀಯ ಕಥೆಯೇ ಒಂದು ರೋಚಕ. ಏನೂ ಇಲ್ಲದೆ ದುಡಿಮೆಗೆಂದು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ 2015 ರಿಂದ 2017ರ ವರೆಗೆ ಕೇವಲ 8 ಸಾವಿರ ರೂ. ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಈಕೆಗೆ ಪರಿಚಯ ಆದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡೋದಾಗಿ ಹೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ಮಹಿಳೆ ನೀಡಿದ್ದಳು. ಹಣದ ರುಚಿ ನೋಡಿದ ಮಹಾಲಕ್ಷ್ಮಿ ನಂತರ ದಿನಗಳಲ್ಲಿ ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡುತ್ತಿದ್ದಳು. ಇನ್ನು 2017 ರಿಂದಲೂ ಈ ದಂಧೆಯನ್ನ ಶುರುಮಾಡಿದ್ದ ಮಹಾಲಕ್ಷ್ಮೀ ಹಿಂದೆ ತಿರುಗಿ ನೋಡಿರಲಿಲ್ಲ. ಇದೀಗ ಪ್ರಕಣದ ಬಗ್ಗೆ ಸಿಸಿಬಿ ಫುಲ್ ಗ್ರಿಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಸೇರಿದಂತೆ ಆರೋಪಿಗಳ ವಿಚಾರಣೆ ಮುಂದುವರೆದಿದೆ.
In a recent crackdown, the Central Crime Branch (CCB) officials apprehended three more individuals in connection with a case involving the sale of newborn babies. This revelation has raised suspicions about reputed hospitals and doctors in Tamil Nadu and Karnataka being part of this illicit network.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm