ಬ್ರೇಕಿಂಗ್ ನ್ಯೂಸ್
01-12-23 10:41 pm Bangalore Correspondent ಕ್ರೈಂ
ಬೆಂಗಳೂರು, ಡಿ.1: ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಗಳು, ನಿಮ್ಮ ಕೊರಿಯರ್ ಪಾರ್ಸೆಲ್ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದ 8 ಮಂದಿ ಸೈಬರ್ ವಂಚಕರನ್ನು ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವಾಸಿಂ, ಹಬ್ಬಿಬುಲಾ, ನಿಜಾಮುದ್ದೀನ್, ಮುಷರಫ್ ಖಾನ್, ಬೆಂಗಳೂರಿನ ನೂರುಲ್ಲಾ ಖಾನ್, ಮೊಹಮ್ಮದ್ ಉಮರ್, ಸೈಯದ್ ಅಹ್ಮದ್ ಹಾಗೂ ಸೈಯ್ಯದ್ ಹುಸೇನ್ ಬಂಧಿತರು. ಮಲ್ಲೇಶ್ವರದ ನಟರಾಜ್ ಬಿ.ಎಸ್.ರಾವ್ ಎಂಬವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, 13 ಲಕ್ಷ ಹಣ ವಶಪಡಿಸಿಕೊಂಡಿದೆ. ಅಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 19 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್, 148 ಬೇನಾಮಿ ಬ್ಯಾಂಕ್ ಖಾತೆಗಳನ್ನ ಜಪ್ತಿ ಮಾಡಲಾಗಿದೆ. ಜೊತೆಗೆ 4500 ಯುಎಸ್ ಡಾಲರ್ ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನವೆಂಬರ್ 10ರಂದು ನಟರಾಜ್ ಅವರಿಗೆ ವಾಟ್ಸ್ಆ್ಯಪ್ ಕರೆ ಮಾಡಿದ ಆರೋಪಿಗಳು ಮುಂಬೈ ಪೊಲೀಸರು ಎಂದು ತಮ್ಮನ್ನು ಪರಿಚಯಿಸಿ ತಮ್ಮ ಪತ್ನಿ ಹೆಸರಿನಲ್ಲಿ ಮುಂಬೈನಿಂದ ಥಾಯ್ಲೆಂಡ್ಗೆ ಕಳುಹಿಸುವ ಫೆಡಕ್ಸ್ ಕೊರಿಯರ್ ಪಾರ್ಸಲ್ನಲ್ಲಿ 140 ಗ್ರಾಂ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೇ ಹಲವು ಬ್ಯಾಂಕ್ ಖಾತೆಗಳನ್ನ ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ತನಿಖೆ ಮುಗಿಯುವ ವರೆಗೂ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ಒಪ್ಪಿಸಬೇಕಿದೆ. ತನಿಖೆ ಬಳಿಕ ಹಣ ನಿಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ನಂಬಿಸಿ ಒಟ್ಟು 1.08 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದರು.
ದಾವಣಗೆರೆ ಹಾಗೂ ಬೆಂಗಳೂರು ಮೂಲದ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸೈಬರ್ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಕೊರಿಯರ್ ಪಾರ್ಸಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಅಮಾಯಕರನ್ನು ಯಾಮಾರಿಸುತ್ತಿದ್ದರು. ಇವರು ಅಮಾಯಕರಿಗೆ ಹಣ ನೀಡಿ ಅವರ ಹೆಸರಿನಲ್ಲಿ ಬೇನಾಮಿ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದರು. ವರ್ಗಾಯಿಸಿಕೊಂಡಿದ್ದ 1.08 ಕೋಟಿ ಪೈಕಿ ದಾವಣಗೆರೆಯ ಆರ್.ಬಿಎಲ್ ಬ್ಯಾಂಕ್ ನಿಂದ ಆರೋಪಿಗಳು 9.34 ಲಕ್ಷ ರೂಪಾಯಿ ಹಣ ವಿತ್ ಡ್ರಾ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಂಚಕರನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
72 ಪ್ರಕರಣಗಳು ಪತ್ತೆ
ವಾಟ್ಸ್ಆ್ಯಪ್ ಆಡಿಯೋ ಕರೆ ಮಾಡಿದ ಆರೋಪಿಗಳು, ಸಾರ್ವಜನಿಕರಿಂದ ವರ್ಗಾಯಿಸಿಕೊಂಡಿದ್ದ 1.08 ಕೋಟಿ ಹಣವನ್ನು ಕೆಲವೇ ಗಂಟೆಗಳಲ್ಲಿ 72 ಬೇನಾಮಿ ಅಕೌಂಟ್ಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆರು ಗಂಟೆಗಳ ವಾಟ್ಸಾಆ್ಯಪ್ ಕರೆ ಮಾಡಿ ಪ್ರಕರಣದ ದೂರುದಾರರ ನಟರಾಜ್ ನಂಬಿಸಿ ಯಾಮಾರಿಸಿದ್ದರು. ಆರೋಪಿಗಳ ಬಂಧನದಿಂದ ರಾಷ್ಟ್ರೀಯ ಅಪರಾಧ ಸಂಗ್ರಹ ಘಟಕದಲ್ಲಿ (ಎನ್ಸಿಆರ್ಬಿ) ದಾಖಲಾಗಿದ್ದ 72 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
The Bengaluru police have arrested eight persons for their alleged involvement in the fake courier scam targeting gullible citizens by claiming that they have found narcotics or materials linked to terrorism in parcels sent in their names.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm